ಸಾಧುಗಳೆಲ್ಲಾ ಚನ್ನಾಗಿ ಕೇಳಿರಣ್ಣಾ

ಇನ್ನಾರಿಗೆ ಹೇಳಲೆಣ್ಣಾ ಸಾಧುಗಳೆಲ್ಲಾ
ಚನ್ನಾಗಿ ಕೇಳಿರಣ್ಣಾ ||ಪ||

ನೆನ್ನೆ ಮೊನ್ನೆಯೆಂದು
ತನ್ನೊಳಗೆ ತಾ ತಿಳಿದು
ತನ್ನೇಸ್ಹುಣ್ಣಿವಿ ದಿನಾ
ಕನ್ನೆಯಮಾಸಿ ಕೂಡಿ ಬಂದು ||ಅ.ಪ.||

ಹಾವು ಇಲ್ಲದ ಹುತ್ತಾ ಕಚ್ಚಲು ಸರ್ಪಾ
ಜೀವ ಹೋದಿತು ಸತ್ತಾ
ಮೋಹ ಮದಗಳು ತಾನು
ತಾಯಿಗಂಡನ ಕೂಡಿಕೊಂಡು
ದೇವರ ಮನಿಯಾಗ ಹಾಸಿಗೆ ಮಾಡಿ
ಕ್ಯಾವಿ ಹಚ್ಚಡ ಹೊಚ್ಚಿದ ಮೇಲೆ ||೧||

ಆಕಾಶ ನೆಲೆಯಾಗಿ ನಿಂತಲ್ಲೆ ನಿಂತು
ಭೂಕಾಂತೆ ತಲೆದೂಗಿ
ಮೂಕನೊಬ್ಬನ ಕೂಡ
ಹಾಕ್ಯಾಡಿ ತರ್ಕಮಾಡಿ
ಪಾಕದ ಗಡಿಗಿ ವಡಿದು ಜಡಿದು
ಕಾಕೀಗಿಡವ ಕಡಿದ ಮೇಲೆ ||೨||

ಮುತ್ತಲಮರವನೇರಿದೆ ಅದರೊತ್ತಲಿರುವ
ಗೊತ್ತಿನ ಭೂತವ ತಡದೆ
ಅತ್ತ ಇತ್ತ ನೋಡಲಾಗಿ
ಸುತ್ತಲೂ ಭಯವಾಗಿ
ನೆತ್ತಿ ಬಿರಿದು ಬತ್ತಲಾಗಿ
ಸತ್ಯ ಶಿಶುನಾಳಧೀಶನ ಕಂಡೆ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ
Next post ಹಾಯ್ಕುಗಳು

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys