ಯಾರೂ ಇಲ್ಲದ ಜಾಗ

ವ್ಯಾಸಮಠದ ಶ್ರೀವ್ಯಾಸರಾಯರು
ಪರೀಕ್ಷೆ ಮಾಡಲು ಶಿಷ್ಯರನು
ನೀಡಿದರೆಲ್ಲರಿಗೆರಡೆರಡಂತೆ
ಮಾಗಿದ ಬಾಳೆಯ ಹಣ್ಣನ್ನು

’ತಿಂದು ಬನ್ನಿರಿ ಬಾಳೆಯ ಹಣ್ಣನು
ಯಾರೂ ಇಲ್ಲದ ಜಾಗದಲಿ’
-ಎಂದು ಕಳುಹಿದರು ಎಲ್ಲ ಶಿಷ್ಯರನು
ಒಂದಿನ ಸಂಜೆಯ ವೇಳೆಯಲಿ

ಅರ್ಧಗಂಟೆಯಲಿ ಎಲ್ಲರೂ ಬಂದರು
ಹಣ್ಣನು ನುಂಗಿದ ಖುಷಿಯಲ್ಲಿ
ಆದರೆ ಕನಕನು ಹಿಂದಕೆ ತಂದನು
ತಿನ್ನದೆ ಹಣ್ಣನು ಮರೆಯಲ್ಲಿ

ವ್ಯಾಸರಾಯರ ಮಠದಲ್ಲಿದ್ದುದು
ಬ್ರಾಹ್ಮಣ ಶಿಷ್ಯರೇ ಹೆಚ್ಚಾಗಿ
ತಾವೇ ಶ್ರೇಷ್ಠರು ಎನ್ನುತ ಜಂಬವ
ಕೊಚ್ಚುತಲಿದ್ದರು ಬಲು ಬೀಗಿ

ಶಿಷ್ಯರೊಳಿದ್ದವ ಕನಕನಾಯಕ
ಹೆಸರಿನ ಕುರುಬರ ವಂಶದವ
ಜಂಬವು ಇಲ್ಲದೆ ವಿನಯತೆ ತುಂಬಿದ
ಚಿನ್ನದ ಗುಣಗಳ ಹೊಂದಿದವ

ಕುಲಹೀನನು ಅವನೆನ್ನುತಲಿದ್ದರು
ತಾವುಗಳೇ ಮೇಲೆನ್ನುತ್ತ
ಅವನನು ಕಡೆಗಣಿಸಿದ್ದರು ಎಲ್ಲರು
ತಮ್ಮಲಿ ತಾವೇ ಗೊಣಗುತ್ತ

ಬ್ರಾಹ್ಮಣ ಶಿಷ್ಯರು ಕನಕನ ಕೈಯಲಿ
ಹಣ್ಣನು ಕಂಡು ನಗಾಡಿದರು
ಶೂದ್ರನಿಗೆಲ್ಲಿಯೂ ಜಾಗವು ಸಿಕ್ಕದೆ
ಬಂದನೆಂದು ಗೊಣಗಾಡಿದರು

ವ್ಯಾಸರು ಶಿಷ್ಯರ ಕೇಳಿದೊಡನೆಯೆ
ನುಡಿದರು ಎಲ್ಲರೂ ಖುಷಿಯಿಂದ
ಯಾರೂ ಇಲ್ಲದ ಜಾಗದಿ ಹಣ್ಣನು
ತಿಂದುದನ್ನು ಲಗುಬಗೆಯಿಂದ

ಒಬ್ಬನು ನುಡಿದನು ಬಲು ಖುಷಿಯಿಂದ-
’ಬಾಗಿಲು ಮುಚ್ಚಿದ ಕೋಣೆಯಲಿ’
ಇನ್ನೊಬ್ಬನು ತಾ ತಿಂದೆನು ಎಂದನು
’ನೀರಲಿ ಮುಳುಗುತ ಹೊಳೆಯಲ್ಲಿ’
ಒಬ್ಬನು ತಿಂದೆನು ಎಂದನು ನಾಚುತ-
’ಶೌಚದ ಕೋಣೆಯ ಮೂಲೆಯಲಿ’

ಕಡೆಯಲಿ ಕನಕನು ನುಡಿದನು ಹೀಗೆ-
’ಗುರುಗಳೆ, ನನಗೀ ಜಗದಲ್ಲಿ
ದೇವರು ಇಲ್ಲದ ಜಾಗವು ಸಿಕ್ಕದೆ
ಹಿಂದಕೆ ತಂದೆನು ಈಗಿಲ್ಲಿ’
ಎನ್ನುತ ಹಣ್ಣನು ಹಿಂದಕೆ ಕೊಟ್ಟನು
ಗುರುಗಳ ಪಾದಕೆ ವಂದಿಸುತ
ಬ್ರಾಹ್ಮಣ ಶಿಷ್ಯರು ನಾಚಿಕೆಯಿಂದ
ನಿಂತರು ತಲೆಯನು ತಗ್ಗಿಸುತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಟ್ಟಕ್ಕೆ ಮಣ್ಣೊತ್ತವು
Next post ಪ್ರೊಫೆಶನಲಿಸಂ ಎಂಬ ಮಾಯೆ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys