ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆನ್ನೆಯರಿಗೆ ನೀಡಿ ಚೆನ್ನೆಮಣೆ
Next post ವಿಚಾರ ಸಾಹಿತ್ಯ : ಇವತ್ತಿನ ಮುನ್ನೋಟ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys