ನೂರು ನೆರಳುಗಳು

ನಕ್ಕವರೆಲ್ಲ ನನ್ನವರೆಂದು
ಮಳೆಗರೆಯಿತು ಮನಸು
ಸುತ್ತ ಮುತ್ತಿದ ಕಂಡ ಕಂಡವರಿಗೆ
ಹದವಾಯಿತು ಕನಸು

ಕಳಕಳ ಎನ್ನುವ ಕನಸಿಗೆ ಅವರು
ಅಮಲಿನ ಹಾಸಿಗೆ ಹಾಸಿದರು
ನರಳಿತು ಕನಸು ಸುಖ ಸಂತಸದಲಿ
ಮರೆತು ಹೋಯಿತು ಮಳೆ ಮನಸು

ಬಸಿರಿನ ಕನಸಿಗೆ ಹುಟ್ಟಿದ ಮಕ್ಕಳು
ನೆಟ್ಟಗಿದ್ದರೆ ತಮ್ಮವರು
ಮೂಗೊ ಕಿವುಡೊ ಕುಂಟೊ ಕುರುಡೊ
ಸೊಟ್ಟಗಿದ್ದರೆ ನನ್ನವರು

ಗಜಿಬಿಜಿ ಕೆಸರಿನ ಜನ ಜೈಲಿನಲಿ
ಹೂತ ಮನಸಿದು ಕಂಬಿ ಎಣಿಸಿದೆ
ಬಿಡುಗಡೆ ಬೇಡದೆ, ಒಳಗೇ ಸಾಯದೆ
ದುಗುಡದ ದಿನಗಳ ದಿನ್ನೆಯೇರಿದೆ

ಕಂಬಿಯ ನಡುವೆ ತೂರುವ ಬೆಳಕಿಗೆ
ಕಾಯುತ ಕಾಯುತ ಕಾಯುತ ನಿಂತೆ
ಒಬ್ಬನೆ ಎಂದು ಒಳಗಡೆ ಹುಡುಕಿದೆ
ನೂರು ನೆರಳುಗಳು ನನ್ನಂತೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಮತೀಂದ್ರ ನಾಡಿಗರ “ದಾಂಪತ್ಯ ಗೀತ”
Next post ಒಮ್ಮೆ ಪ್ರೀತಿಯಲಿ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys