ಬಾಯಾರಿದೆ ಹೃದಯ

ಹೂತು ಹೋಗಿದೆ ಒಲವಿನ ಮಾತು
ಉಸಿರು ನರಳಿದೆ ಸೆಣಸುತ ಸೋತು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ಹೊಟ್ಟೆಯ ಒಳಗಿನ ಸುಟ್ಟ ವಾಸನೆ
ಬೀದಿಗೆ ಹರಿದು ಬಡತನ ಬಯಲು
ಮೂಗು ಮುಚ್ಚಿದೆ ಮನೆ ಮನೆ ಸಾಲು
ಬೀದಿ ಬೀದಿಯಲಿ ಹುಡುಕಿ ನೋಡಿದರು
ಹೃದಯದ ವಿಳಾಸ ಅಲ್ಲಿಲ್ಲ
ಬೆವರು ಬಸಿದರೂ ಸಿಗಲಿಲ್ಲ.

ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ನೆಲಮಾಳಿಗೆ ಮನಸು
ಸೆರೆವಾಸದ ಕನಸು
ಬೆತ್ತಲ ಭಾವನೆ ಕೊಯ್ಯುವ ಕತ್ತಲು
ಇದ್ದರು ಪ್ರಾಣ, ಗೋರಿಯ ಬದುಕು
ಒಣ ವೇದಾಂತದ ವಿಷ ಸಾಕು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ
ಇನ್ನೆಲ್ಲಿದೆ ಸಮಯ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಡ್ಡರ್ಸೆ ರಘುರಾಮಶೆಟ್ಟಿ ಅವರ ‘ಬಹುರೂಪಿ ಅರಸು’-ನೇರ ಅನುಸಂಧಾನ
Next post ಆಡಿ ಬಾರೋ ರಂಗ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

cheap jordans|wholesale air max|wholesale jordans|wholesale jewelry|wholesale jerseys