ಗಗನ ಗ್ರಂಥ

ಗುಡ್ಡ-ಬೆಟ್ಟ ಸಾಲು-ಸಾಲೇ-ಸಾಲು
ಗಗನಚುಂಬಿ ಕೊಡಚಾದ್ರಿಯಲಿ
ಮನತಣಿಯೇ ಕೈಬೀಸಿ ಕರೆತಿಹವು

ಎತ್ತರೆತ್ತರ ಮರ-ಗಿಡ ಕಣ್ಮನಕೆ ಕಾನು-ಕಂಪು
ಕರಿ ಕಲ್ಲು ಗರ್ಭದಲಿ ಚಿಮ್ಮುವ ಜಲಧಾರೆಯಲಿ
ಬೀಸುವ ತಂಗಾಳಿ ಮನಕೊಂದು ಉನ್ಮತ್ತಹಿತವು

ನೇಸರನುದಯದಿ ಪಳ-ಪಳನೆ
ಹೊಳೆಯುತಿದೆ ಎಲೆ ಹಸಿರು ಬೆಟ್ಟ ಮೈ

ಬಾಗಿದ ಬಾನಿನಂಚಿನಲಿ ಚಲುವಿನ ಸಂಜೆಗೆಂಪು
ಚಿಮ್ಮಿ ಸಂತಸದ ಸ್ವಾಗತವ ನೀಡುತಿರಲು
ಮುಗಿಲು ಮಲ್ಲಿಗಿ ಅರಳಿ ಮುದವು ಸಿಗುವುದು ರಾತ್ರಿಯಲಿ

ಬೆಟ್ಟ ತುದಿಯೇರಲು ಮುಳ್ಳು-ಕಲ್ಲು
ಬಲು ದೂರ-ದಾರಿ ಡೊಂಕ-ಡೊಂಕು

ದಣಿದ ಮನಕೆ ಬಯಕೆಯ ನಿರಾಶೆಯಲಿ
ಬದುಕಿನ ಯಾತ್ರೆ ಬಿಡದ ಛಲ
ನಿರಾಶರಾಗದೇ ಧೃತಿಗೆಡದೀಜಿದಾಗ
ಶ್ರಮದ ಪ್ರತಿಫಲ ಮುಪ್ಪಿನಲಿ ಸಾವು
ಅದುವೇ ಬದುಕಿನ ಸಲೆ

ಪ್ರಕೃತಿಯೊಡಲ ಕನ್ನಡಿಯಲಿ
ಹುಟ್ಟು ಸಾವು ಮರು ಹುಟ್ಟು ಗಗನಗ್ರಂಥ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಂಪತಿ
Next post ಟೋಪಿ ಮಾರುತಿ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys