ಇಲ್ಲೇ ಇರುವೆ..

ಆಶೆ ಬಿಡು ಎಂದ ಬುದ್ಧ
ಏನು ಮಾಡಲಿ ನಾನಿಲ್ಲ ಸಿದ್ಧ.

ಬಯಸದೆ ಹುಟ್ಟಿ ಬಂದೆ
ಬಯಕೆಯ ಬುಟ್ಟಿಯಾದೆ

ಬುಟ್ಟಿಯನ್ನೇ ನೆಚ್ಚಿಕೊಂಡೆ
ಗಂಡ ಮಕ್ಕಳ ಹಚ್ಚಿಕೊಂಡೆ

ಬದುಕನ್ನ ಒಪ್ಪಿಕೊಂಡೆ
ಬೆಂಕಿಯನ್ನ ಅಪ್ಪಿಕೊಂಡೆ

ಆಶೆ ಬಿಡು ಎಂದ ಬುದ್ಧ
ಏನು ಮಾಡಲಿ ನಾ ಬದ್ಧ

ಸಂಸಾರ ಸಾಗರವಂತೆ
ದುಃಖದ ಆಗರವಂತೆ
ಇದ್ದೂ ಇಲ್ಲದಂತಿರಬೇಕಂತೆ
ನೀರೊಳಗಿನ ತಾವರೆ ಎಲೆಯಂತೆ

ಎಲ್ಲವ ತಿಳಿದೂ ತಿಳಿದೂ
ಇರುವೆ ಯಾಕೋ ಇನ್ನೂ ಸಾಕೆನಿಸಿಲ್ಲ ಗುರುವೆ

ನಾ ಪಡಕೊ ಬಂದದ್ದೇ ಈ ಸಂತೆ
ನಾನಿಲ್ಲೇ ಹೀಗೆ… ನಿಶ್ಚಿಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟೋಪಿ ಮಾರುತಿ
Next post ಛಿ! ನಾನೊಬ್ಬ ಕೃತಘ್ನಳು

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys