ಗಾಂಧಿ

ಇಲ್ಲವೆಂದರೂ
ಇಲ್ಲವಾಗುವುದೇ?

ನೆನಪು-
ಹುಲ್ಲು ಗರಿಕೆಯಂತೆ
ಹಸಿರಾಗಿದೆ.

ಆ ಚಿತ್ರ ಅವನದೇ
ಮಳೆಬಿಲ್ಲಿನಂತೆ
ಭರತ ಖಂಡದ ಮೇಲೆ ಬಾಗಿದೆ
ತಂಗಾಳಿ ಅದನು ತೂಗಿದೆ.

ಕಣೋಳಗಿನ ಮಿಂಚು
ಭೂಮಂಡಲವ ಬೆಳಗಿದೆ
ನಿಸ್ವಾರ್ಥ ನಗೆ
ಮೂಲೆ ಮೂಲೆಯನೂ ತಾಕಿದೆ

ಸರಕು ಸಂತೆಯಲಿ
ಗೌಜು ಗದ್ದಲದಲಿ
ತುಸು ನೂಲ
ತಾನೇ ನೂಲುತಿದೆ ಚರಕ

`ಅರಿವೆ’ ಅರಿವೆಂಬ ರೂಪಕ
ಅಳಿಸಲಾಗದು ಅಚ್ಚೊತ್ತಿದಂತಿದೆ

ಅಷ್ಟು ಸುಲಭವಾಗಿ
ಆರದು
ಅವನು ಹಚ್ಚಿದ ದೀವಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್
Next post ಭಾವಪೂರ್ಣ ಶ್ರದ್ಧಾಂಜಲಿ

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys