ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಇದ್ದ ಬುದ್ಧ
ರಾಮ, ಕೃಷ್ಣ, ಶಿವ, ಗಾಂಧಿ
ಅಂಬೇಡ್ಕರ್ ಅವರ ಜೊತೆಗೆ ಕುಳಿತಿದ್ದ.

ಮೊಂಡು ಕೈ, ಹರಿದ ಅಂಗವಸ್ತ್ರ….
ಬುದ್ಧ ಹೌದೋ ಅಲ್ಲವೋ ಎಂದು
ಅನುಮಾನಿಸುವಷ್ಟು ಚಿಂದಿಯಾಗಿದ್ದ.

ಆದರವೇ ಜಾಜ್ವಲ್ಯಮಾನ ಕಣ್ಣುಗಳು
ಸೆಳೆದವು, ಹೊಳೆದವು ಫಳ ಫಳ
ಪುಳಕಿತಳಾಗಿ ಮನೆಗೆ ಕರೆದೆ, ಬಂದ.

ಒಣಗಿದ ಹೂವು, ಆರಿದ ದೀಪ, ಪಿನ್ನು,
ಪುಸ್ತಕ, ಎಂಜಲು ತಟ್ಟೆ, ಒಣಗಿದ ಬಟ್ಟೆ,
ಹಣ್ಣು-ತರಕಾರಿಯ ಒತ್ತರಿಸಿ, ಅಂಗೈಯಲ್ಲಿ
ಗುಡಿಸಿ, ಸಾರಿಸಿ ಜಾಗ ಮಾಡಿಕೊಟ್ಟೆ-
ಮೇಜಿನ ಮೂಲೆಯಲಿ ಕೂತ.

ಅವನು ಬುದ್ಧ
ಮೈತ್ರಿ-ಕರುಣೆಯ ಸಾಕಾರ
ಅವನದೇ ಮಾತು: ಸಂಸಾರ ದುಃಖಸಾಗರ
ಆಶೆಯೇ ದುಃಖಕ್ಕೆ ಮೂಲ, ಜೀವನವು ನಶ್ವರ.

ಮಾರನಿಗೊಲಿದಿದ್ದ ನಾವು ಅವನ ಮುಂದೆಯೆ
ಶುರು ಹಚ್ಚಿಕೊಂಡೆವು ವ್ಯವಹಾರ
ಮನೆ ಮಂದಿಯ ಮೋಹ, ಮದ, ಮತ್ಸರ
ಆತಂಕ, ಆವೇಶ, ದುಃಖ, ಕೋಪ
ಎಲ್ಲವೂ ಈಗವನ ಸಮ್ಮುಖ!

ದೂಷಣೆ, ಶೋಷಣೆ, ಘೋಷಣೆ
ಯುದ್ಧ-ಕದನ ವಿರಾಮಗಳಿಗೆ-
ಅವನೇ ಸಾಕ್ಷಿ, ಅವನದೇ ರಾಯಭಾರ.
ರೋಗ ರುಜಿನ, ಮರಣ ಎಲ್ಲವುಗಳಿಗೆ
ಅವನೇ ಕಾರಣ, ಅವನಿಂದಲೇ ಶಮನ!

ಅಷ್ಟಾಂಗ ಮಾರ್ಗಗಳಿಗೆ ನಮಿಸಿದೆವು ನಿಜ,
ಆಚರಿಸಿದೆವೋ ಅನುಮಾನ!
ಏರಿದ ಎತ್ತರ, ಇಳಿದ ಪ್ರಪಾತ,
ಕವಿದ ಕಾರ್ಮೋಡ, ಕರಗಿದ ಕಾವಳ-
ಇಲ್ಲದೆಯೂ ಇದ್ದಂತೆ, ಜೊತೆಗಿದ್ದ….

ಇಪ್ಪತ್ತು ವರುಷವಾಯಿತು ಬುದ್ಧ
ನಮ್ಮಲ್ಲಿಗೆ ಬಂದು-
ನಮ್ಮೊಂದಿಗೇ ನಿಂದು, ನೊಂದು, ಬೆಂದು;
ಈಗವನು ನಮ್ಮವನು, ನಮ್ಮಲ್ಲೇ ಒಂದು.

ಇನಿತೂ ಬದಲಾಗಿಲ್ಲ….ಅದೇ
ಗುಂಡು ಮುಖ, ತುಂಡು ಬಾಯಿ
ಮೊಂಡು ಕೈ, ಹರಿದ ಅಂಗವಸ್ತ್ರ,
ಅದೇ ಮೌನ, ಸಮಾಧಾನ

ನಾವೂ ಅಷ್ಟೆ, ಇನಿತೂ ಬದಲಾಗಿಲ್ಲ!
ಅದೇ ವೇಗ, ಅದೇ ಭೋಗ,
ಅದೇ ತನ್ಹಾ….ಅದೇ ತಲ್ಲಣ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾದು ಕುಳಿತ ಪೆಣತಿನಿಗಳು
Next post ಮನೆವಾಳ್ತನ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

cheap jordans|wholesale air max|wholesale jordans|wholesale jewelry|wholesale jerseys