ದರುಶನ

ಕತ್ತಲೆಯ ಕೊಂಬೆ ಸವರಿ
ನಕ್ಷತ್ರ ಎಲೆಗಳನೊಟ್ಟಿ ರಾಶಿಯಾಗಿಸಿ
ಹಾದಿ ಬೀದಿಯ ಸೂರ್ಯನಂತೆ ಬೆಳಗಿದ.

ಕಪ್ಪು ಮುಖ, ಕೆಂಡಗಣ್ಣು
ಹಳದಿ ಹಲ್ಲು, ತಲೆಯೋ ಹೊರೆ ಹುಲ್ಲು
ಶಂಖ ಚಕ್ರ ಗದಾಪದ್ಮ ?…
ಅಲ್ತಲ್ತು ಅಲ್ತಲ್ತು
ಗೋರೆ, ಪೊರಕೆ, ಸನಿಕೆ ಸಂಭೂಷಿತ-

ಒಂದು ಮುಂಜಾನೆ
ಮನೆಯಂಗಳದಲ್ಲಿ ಪ್ರತ್ಯಕ್ಷ.

ಮಡುಗಟ್ಟಿತ್ತು ಶತ ಶತಮಾಗಳ ಕೊಳೆ
ಸುತ್ತ ಕಸ ಕಡ್ಡಿ ಕೆಸರಿನ ಹೊಳೆ
ಹರಿಸು ತಂದೆ, ಹರಿಸು ಮುಂದೆ ಅಂದೆ
ವಿನೀತಳಾಗಿ…

ಕೊಳೆ ಕಳೆದು ಹರಿಸಿದ ನೀರು ಸರಾಗ
ಹೆಜ್ಜೆಯನಿಕ್ಕಿ ಒಪ್ಪಗೊಳಿಸಿದ ಒಳಗ
ಮೂಲೆ ಮೂಲೆಯ ಗುಡಿಸಿ
ನಿರ್ಮಲವಾಗಿಸಿದ.

ಅದೆಲ್ಲೋ ದೂರ ಗುಡಿ ಗೋಪುರ
ಇಲ್ಲಿ ಇಷ್ಟು ಹತ್ತಿರ ಅದರ ಸರದಾರ.

ತಂಗಳನ್ನವ ಉಂಡು, ಕಚ್ಚಿ ಬೀಡಿಯ ತುಂಡು
ಪೊರಕೆ, ಸನಿಕೆ ಹಿಡಿದ ಕೈಗಳನೆತ್ತಿ
‘ಮರಳಿ ಬರುವೆ’ ಎಂದು ಹೊರಟು ಹೋದ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಮಿಷ
Next post ನಿನ್ನೆದೆಗೆ ನಾನೇನ ತಂದೆ?

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys