ಹೇಗೆ ದಂಡಿಸಿದ್ದಾರೆ ನೋಡಿ…

ನುಜ್ಜುಗುಜ್ಜಾಗಿದೆ ಪ್ರೀತಿ ಸಿಲುಕಿ ಈ ಚಕ್ರದಡಿ
ಬೂದಿಯಾಗಿದೆ ಸುಟ್ಟು ಬೆಟ್ಟದ ಆ ತಪ್ಪಲಲಿ
ಅಗೋ ಅಲ್ಲಿ ತೂಗುತಿದೆ ಮರದಲಿ
ಇಗೋ ಇಲ್ಲಿ ತೇಲುತ್ತಿದೆ ಹುಚ್ಚು ಹೊಳೆಯಲಿ.

ಕೊಚ್ಚಿ ಹಾಕಿಹರು ಅದನು ಕೂಡು ರಸ್ತೆಯಲಿ
ವಿಷಕೆ ವಶವಾಗಿ ರೋಷಕ್ಕೆ ಈಡಾಗಿ
ಎವೆ ಮುಚ್ಚಿ ಮಲಗಿದೆ ಪ್ರೀತಿ
ಮಣ್ಣೊಳೊಳಗೆ ಹಣ್ಣಾಗಿ.

ದಂಡನೆಗೆ ಅಂಜಿ ಅಳಿಯುವುದೆ ಪ್ರೀತಿ?
ಅಡಗುವುದೆ? ಉಡುಗುವುದೆ?

ನಡುಗುವುದಿಲ್ಲ ಅದರ ನಾಡಿ;
ಅದರ ಉಸಿರೇ ನಿರ್ಭೀತಿ.

ಮರುಹುಟ್ಟು ಪಡೆಯುವುದು,
ಅನುದಿನವೂ ಅರಳುವುದು ಗಿಡದಲ್ಲಿ ಹೂವಾಗಿ,
ನದಿಯಲ್ಲಿ ಅಲೆಯಾಗಿ,ಗಿರಿಯಲ್ಲಿ ನವಿಲಾಗಿ
ನಲಿಯುವುದು, ಬಲಿಯುವುದು ಬಿದಿಗೆಯ ಚಂದ್ರನಂತೆ
ಮಿನುಗುವುದು ನಕ್ಷತ್ರವಾಗಿ, ಹಂಬಲಿಸುವ
ಹೃದಯದಲಿ ಹಾಡಾಗಿ ಹೊಮ್ಮುವುದು……

ಹಗೆಯೆಂದು ಬಗೆದವರೆಷ್ಟೋ ಮಂದಿ ಮುಟ್ಟಿ
ಮನುಷ್ಯರಾದರು ಪ್ರೀತಿಯ ಆತ್ಮವನ್ನು…
ಮನುಷ್ಯರಾದವರು ಮತ್ತೆ ಮತ್ತೆ ಬಿತ್ತಿ ಬೆಳೆದರು
ಪ್ರೀತಿ ಬೆಳೆಯನ್ನು…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಡು ಮದುವೆಗಳು
Next post ಇಜ್ಜೋಡು

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys