ಚರಿತ್ರೆ

ಚರಿತ್ರೆಯ ಚಂದಿರ ಸುರಿಸಿದ್ದು
ಬೆಳದಿಂಗಳಲ್ಲ ಗೆಳೆಯ,
ಮಟಮಟ ಮಧ್ಯಾಹ್ನದ ಬಿಸಿಲು.
ಈ ಬಿಸಿಲಿಗೊ ನೂರೆಂಟು ಟಿಸಿಲು!
ಬೆಳೆಯುತ್ತ ಇಳಿಯುತ್ತ ಭೂಮಿಗೆ
ಭೂತ ಬೆಂಗಾಡಿನ ಪಾತಾಳವಾಗುತ್ತ
ಪಾತಾಳದೊಳಗೊಂದು ಪುರಾಣವಾಗುತ್ತ
ನೋಟದೊಳಗೆ ನುಗ್ಗುವ ನೀರು
ಪುರಾಣ ಪುಣ್ಯ ಪಾನಕವಾಗಿದೆ,
ಚರಿತ್ರೆ ಚಂದಿರ ಕರಗುತ್ತಿದೆ.

ಈಗ ಹೇಳು ಗೆಳೆಯಾ
ಸೋಸಿದರೆ ಸಿಕ್ಕುವುದು ಏನು?
ಚರಿತ್ರೆ, ಪುರಾಣ ಅಥವಾ ನಾನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆನ್ನವೀರ ಕಣವಿಯವರ ‘ಮೃತ್ಯುಬಂಧ’ – ಒಂದು ಟಿಪ್ಪಣಿ
Next post ಸ್ವಾತಿಯ ಮಳೆ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys