ಕಳೆದು ಹೋದ ದಿನಗಳು

ಕಳೆದು ಹೋದ ದಿನಗಳೆ
ಕನಸಾಗಿ ಕಾಡದಿರಿ
ಉರುಳಿಹೋದ ಹಾಡುಗಳ
ಉರುಳಾಗಿ ಮಾಡದಿರಿ ||

ಕೈ ಬೀಸಿದ ಚಂದ್ರತಾರೆ
ಮಗಿಲಿನಾಚೆ ನಿಲ್ಲಲಿ
ಕವಿ ಮಾಡಿದ ಆ ಕೋಗಿಲೆ
ಕಾವ್ಯದಲ್ಲೆ ನೆಲೆಸಲಿ
ಬದುಕು ನಿತ್ಯ ಶ್ರಾವಣ
ಸುವರ್‍ಣದ ಹೂರಣ
ನೆನಪಾಗಿ ಬಾರದಿರಲಿ
ಚಿತ್ರವಾಗಿ ಕಾಡದಿರಲಿ

ಗಿರಿ ಪರ್‍ವತ ಹೂ ಹಸಿರು
ಹೊಸತು ಬಣ್ಣ ತಳೆಯಲಿ
ನೆಲೆದೊಡಲಿನ ಬಿಸಿಯುಸಿರು
ಕಾವ್ಯಕೆ ಬಸಿರಾಗಲಿ
ನಾಳೆ ಇರಲಿ ನಾಳೆಯಾಗಿ
ಭೂತವಿರಲಿ ನಿನ್ನೆಗೆ
ಬದುಕ ಪಯಣ ಸಾಗುವಲ್ಲಿ
ವರ್‍ತಮಾನ ಹಾಡಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮಭಾಗ್ಯ
Next post ನೋವು

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys