ಉಸಾಬರಿ

ಬರೆಯಬೇಕು ನಾ ಏನನ್ನಾದರೂ
ವರ್ಷಗಳಿಂದಲೂ ಮನ ತುಡಿಯುತ್ತಿದ್ದರೂ
ಬರೆಯಬಲ್ಲೆನಾದರೂ ನಾನು
ಉಳಿದಿರುವುದಾದರೂ ಏನು?
ಶತಶತಮಾನಗಳಿಂದ ಬರೆದು ಬರೆದು
ನವರಸಗಳೆಲ್ಲವ ಅರೆದು ಕುಡಿದು
ಮಾಡಿ ಸರಸತಿಯ ಭಂಡಾರ ಲೂಟಿ
ನನಗೇನು ಸಿಕ್ಕದು ಬರೀ ಪಾಟಿ.
ಪಂಪ ರನ್ನ ಪೊನ್ನ ಜನ್ನರ ಕಾವ್ಯದ ಗಂಟು
ನನಗಂತೂ ಅರ್‍ಥೈಸಿಕೊಳ್ಳಲಾಗದ ಕಗ್ಗಂಟು
ಕನ್ನಡದ ಕಂಪರಿಯದ ಮೂಗಿಗೆ
ದೇವಭಾಷೆಯ ಗಂಧ ಪಸರಿಸುವುದೇ
“ನೀರಿಳಿಯದ ಗಂಟಲಲಿ ಕಡುಬು”
ಮುದ್ದಣ್ಣನ ಉಕ್ತಿ
ನನ್ನ ಪಾಲಿಗಲ್ಲ ಅತಿಶಯೋಕ್ತಿ.
ಕುವೆಂಪು, ಬೇಂದ್ರೆ ಪುತಿನಾರ ಗತ್ತು
ಬ್ರಹ್ಮ ನೀಡಲಿಲ್ಲ ಬುದ್ಧಿಗೆ ಕಸರತ್ತು
ಇನ್ನು ಕಥೆ ಬರೆಯೋಣವೆನಿಸಿತು
ನನ್ನದೇ ಆಸ್ತಿ ಎಂದರು ಮಾಸ್ತಿ
ಕವನ ಗೀಚಿದರೆ ಬಲು ಸುಲಭವೆಂದುಕೊಂಡೆ
ಒಬ್ಬೊಬ್ಬ ಕವಿಗಳು ಎದುರು ಬಂದು
ನನ್ನದೇ ಪದ, ನನ್ನದೇ ಶೈಲಿ
ಅರಚಾಡಿದರು ಕಿವಿ ಮುಚ್ಚಿಕೊಂಡೆ.
ನಾಟಕವಾದರೆ ಹೇಗೆ? ಕಾಳಿದಾಸನ ಹಾಗೆ
ಈ ನಾಟಕ ಪಾಠಕ ಎಲ್ಲಾ ತಲೆಬಿಸಿ
ಹರಿಹರನ ರಗಳೆಯೇ ವಾಸಿ.
ಕಾದಂಬರಿಯೇ ಸರಿ, ಎಲ್ಲರಿಗೂ ಮೋಡಿ
ಆದರೆ ಬರೆಯುವ ಮೂಡಿಲ್ಲ ಬಿಡಿ
ಕುಣಿಯಲಾರದವಳಂದಳಂತೆ ನೆಲಡೊಂಕು
ಇಲ್ಲ ನನ್ನ ಲೇಖನಿಯ ತುದಿಯೇ ಕೊಂಕು.
ನವ್ಯಕಾವ್ಯ ಬರೆದರಾಯ್ತು ಅರ್ಥವಾಗದ ಪರಿ
ಬಲವಾಗಿ ನಿರ್ಧರಿಸಿದೆ ಮನೆಯೇ ಸರಿ
ಹೋದರಾಯ್ತು ಸಂಸಾರದಲ್ಲಿ ತರಾ ‘ವರಿ’
ದುರಾದೃಷ್ಟಕ್ಕೆ ಅಂದೇ ಮುಗಿಯಬೇಕೆ ತರಕಾರಿ
ಪಲ್ಯ ಮಾಡಲಿಲ್ಲವೆಂದು ಗಂಡನ ಮಾರ ಮಾರಿ
‘ಚೂಡಿ’ ತರಲಿಲ್ಲವೆಂದು ಮಗಳ ಕಿರಿಕಿರಿ
ಆಯಿತಲ್ಲ ಬರೆವುದಕ್ಕೆ ಕತ್ತರಿ
ಬರೆಯುವವರು ಬರೆಯಲಿ ಬಿಡಿ
ನನಗೇಕೆ ಈ ಉಸಾಬರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಜ್ಞಾನ-ಕ್ರಿಯೆ
Next post ಹರಕು ಅಂಗಿಯ ಮುರುಕು ಮನೆಯ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys