ಮುಗಿಲ ಮೇಲೆ ಮುಗಿಲು ತೇಲಿತು

ಮುಗಿಲ ಮೇಲೆ ಮುಗಿಲು ತೇಲಿತು
ಚಂದ್ರ ಸೂರ್ಯರ ತೂಗಿತು
ಗಿರಿಯ ಮೇಲೆ ಗಿರಿಯು ಏರಿತು
ಹಸಿರು ಕಾನನ ಹಾಡಿತು

ಮಂದ ಮಾರುತ ತುಂಬಿ ನೀಡಲು
ಮೌನ ಎಚ್ಚರವಾಯಿತು
ಮುಗಿಲ ಧೂಳಿಯ ಗೂಳಿ ಚಿಮ್ಮಲು
ಗಾನ ಕೇಕೆಯ ಹಾಕಿತು

ಮಾತು ಮಂತ್ರಾ ಶಬ್ದ ಜಪವು
ಆತ್ಮ ಕೋಗಿಲೆ ಕೂಗಿತು
ಪಕ್ಕ ಬಿಚ್ಚಿತು ಹಣ್ಣು ಕಚ್ಚಿತು
ಗಾನ ಹೊಚ್ಚುತ ಹಾಡಿತು

ಮರಹು ಜಾರಿತು ಅರುಹು ಮೂಡಿತು
ಸ್ವರ್ಣಮಂದಿರ ಕರೆಯಿತು
ಅಂತರಂಗದ ಸಪ್ತರಂಗದ
ವರ್ಣ ಬಾಗಿಲು ತೆರೆಯಿತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುಡಿತ
Next post ಏನು ಸಾವಯವವೋ ? ಅವರಿವರಿಗಾಗಿ ದುಡಿಯುತಿರೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys