ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ
ಪ್ರೇಮವಂಕುರಿಸಿ ಸೌರಭವು ಹಾರಿ
ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ
ಪಾರ ಅಪರಂಪಾರ ದೂರ ಸೇರಿ

ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ
ಕಣ್ಣರಳಿ ಬಂತಾಗ ಭವ್ಯದೃಷ್ಟಿ
ಆವ ಆಶೆಯ ಪಾಶವೆಸಗಿಲ್ಲ ಬಿರುಗಾಳಿ
ಬೀಸಿ ಸೂಸಿತು ಈ ಪ್ರಕಾಶವೃಷ್ಟಿ

ನಲ್ಲನಲ್ಲೆಯ ಪ್ರೇಮ ಬಲ್ಲೆನೆಂಬುವ ಬಿರುದು
ಹದಿನಾಲ್ಕು ಲೋಕಕ್ಕೆ ತಟ್ಟಿಮುಟ್ಟಿ
ಎಲ್ಲೆಡೆಗೆ ವ್ಯಾಪಿಸಿತು ಬೆಳ್ಳಬೆಳು ಬೆಳಕಾಗಿ
ನನ್ನಲ್ಲೆ ಆ ಕಳೆಯ ಮೊಳಕೆ ಹುಟ್ಟಿ

ಉರಿದುರಿದು ಉರಿದೆದ್ದ ಆ ಊರ್‍ಮೆಯುರಿಯಲ್ಲಿ
ಒಂದಾಗಿ ಸದಾ ಸವಿಯನುಂಡೆ
ಸುರರು ಸುರಗುರು ಸೂರ್ಯಚಂದ್ರರೂ ಕಾಣದಾ
ಬೆಳಕಿನುನ್ಮಾದದಾ ಕಾಂತಿ ಕಂಡೆ

ಪ್ರೇಮದಾಚೆಯ ಊರ್‍ಮೆ ಪ್ರೇಮಕ್ಕೆ ಬೀಜವದು
ಪ್ರೇಮದಾ ಫಲವಾಗಿ ಫಲಿಸಿ ನಿಂದು
ಉಮ್ಮಳಿಸಿ ತನ್ಮಯತೆ ಪಾವಿತ್ರ್ಯ ಪರವಶತೆ
ಪರದೆಗಳ ಹರಿಹರಿದು ಸುಳಿದು ಬಂದು

ವೇದಶಾಸ್ತ್ರ ಪುರಾಣ ವರ ಕುರಾನಗಳೆಲ್ಲ
ಕುಣಿಕುಣಿದು ನನ್ನ ಊರ್‍ಮೆಯೊಳೆ ಹುಟ್ಟಿ
ಅಡಗಿಹವು ಇಡಗಿಹವು ಎಲ್ಲೆಡೆಗೆ ನುಡಿಯುವವು
ಊರ್‍ಮೆಕೂರ್‍ಮೆಯೆ ಭವ್ಯದಿವ್ಯ ಸೃಷ್ಟಿ

ಮರವು ಮತ್ಸರ ಕರಗಿ ಕಷ್ಟನಷ್ಟವು ಸುಟ್ಟು
ಭರದಿ ಭಸ್ಮಿಭೂತವಾಗಿ ಹಾರಿ
ಅರವು ಅಗಲಾಗಿ ಅದ್ಭುತದ ಅಘಟಿತ ಶಕ್ತಿ
ಹೆಡಕರಿಸಿ ಹೊಳೆದು ಕುಡಿಮಿಂಚುದೋರಿ

ಘನಸಿರಿಯ ಚಿನ್ಮಯ ಚಿದಾನಂದವನು ಕಂಡೆ
ಹೊರಮರೆದು ಒಳ ಉರ್‍ಮೆ ಕುದುರೆ ಏರಿ
ನೆನಪುದೋರಿತು ಇತ್ತ ಕನಸು ಹರಿಯಿತು ಅತ್ತ
ಹತ್ತುತಾಸಿನ ಹಿಗ್ಗು ಹಾಡನೇರಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೇಗಿಲು
Next post ಭವಿಷ್ಯದ ಚಿಂತೆ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys