ನಾಳಿನ ಮಗು

ಫಲದ ನಿರ್‍ಣಯವು ಏನು ಆದರೂ ಕ್ಷುಬ್ಧನಾಗನವನು
ನೇರಾದ ರೀತಿ ರುಜು ಅವನ ನೀತಿ, ಸಿದ್ಧಿಸದೆ ಇದ್ದರೂನು
ತನ್ನ ಯೋಗ್ಯತೆಗೆ ತಕ್ಕ ರೀತಿಯಲಿ ಕರ್‍ಮಕುಶಲನಾಗಿ
ಸತ್ಯವನ್ನೆ ಸಾರುವನು ಜಗಕೆ ನಿರ್‍ಭೀತ ಧೀರನಾಗಿ.

ಫಲವೆಂದೆ ಬರಲಿ ಯುಗಯುಗವು ತಾಳಿ ಎದೆಗೆಡದೆ ಇರುವನಾತ
ಗೊಣಗುಡದೆ ಅವನು ಅವಘಡವ ಸಹಿಸಿ ಎದುರಿಸುವ ವೀರಜಾತ
ಸಡಲಿಸನು ಅವನು ಹವಣಿಕೆಯ ಹಿಡಿತ ಶತಕಾನುಶತಕವಾಗಿ
ಸಿದ್ಧಿಸಲಿ ಬಿಡಲಿ ಸಮತೆಯನು ಕಳೆದುಕೊಳನಾತ ಸಾಮ್ಯಯೋಗಿ.

ಅಪಜಯವು ಬರಲಿ ಕೊನೆ ವಿಜಯವಿಹುದು ಎನುತೆನುತ ಯುದ್ದವೆಸಗಿ
ಮೊಗದಲ್ಲಿ ನಗೆಯು, ಎದೆ ಸೊಗದ ಬಗೆಯು, ಸ್ಥಿತಿ ಬರಲಿ ಎಂತೊ ಮಸಗಿ
ಪರಗುಣದ ರಸಿಕ ಸಹಕಾರಿಯವನು ಸತ್ಕೃತ್ಯವೆಲ್ಲಕೂನು
ಸಂಯಮದಿ ಬದ್ಧ ಪ್ರಾಮಾಣ್ಯಸಿದ್ಧ ಹೀಗಿರಲು ಬೇಕು ಮಗುವು.
ಅವನಲ್ಲಿ ದಿವ್ಯಜ್ಯೋತಿಗಳ ಉದಯ ತೋರುವದು ಬರುವ ಯುಗವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅತೃಪ್ತಿ
Next post ವಾಗ್ದೇವಿ – ೨೭

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys