ಜೀವನದ ಮುಸ್ಸಂಜೆಯಲಿ
ಜವಾಬ್ದಾರಿಗಳೆಲ್ಲವ ಕಳೆದು
ನಾವೇ ನಾವಾಗಿರಬೇಕೆಂದು
ನಾವೇ ಕಟ್ಟಿದ ಗೂಡಲ್ಲಿ ನೆಲೆಯೂರಿದಾಗ
ನಮ್ಮನ್ನು ನಾವು ಕಳಕೊಂಡಿದ್ದೆವು.
ಎದುರಿಗಿದ್ದ ಮರುಭೂಮಿಯಲಿ
ಹುಡುಕಹೊರಟಾಗ ಸಿಕ್ಕಿದ್ದೆಲ್ಲ ಬರೆ ಮರುಳು!
ಪ್ರೀತಿಯ ಹಸಿರಿರಲಿಲ್ಲ
ಒಲವಿನ ಹೂವಿರಲಿಲ್ಲ
ಅರಿವಿನ ಸಿಂಚನವಿರಲಿಲ್ಲ
ದುಡಿಮೆಯ ಹೋರಾಟದಲ್ಲಿ ಸರಿದಾಗಿತ್ತು
ನಾನೊಂದು ಕಡೆ ಅವನೊಂದು ಕಡೆ.
ಸಮಾನಾಂತರ ರೇಖೆಗಳಂತೆ!
ಬರೇ ಒಂದು ನೂಲೆಳೆಯ ಅಂತರ
ಆದರೆ ಒಂದಕ್ಕೊಂದು ಸೇರಲಾಗದ ದೂರ.
ಹೇಗಾಯ್ತು ಹೀಗೆ ಹತ್ತಿರವಿದ್ದರೂ ದೂರ?
ಒಸರುವುದೇ ಮರುಭೂಮಿಯಲ್ಲಿ ಒಯಸಿಸ್
ಉಕ್ಕಿ ಹರಿಯುವುದೇ ಪ್ರೀತಿ?
ಕೂಡುವವೇ ಸಮಾನಾಂತರ ರೇಖೆಗಳು
ಎಂದಾದರೂ ಒಂದು ದಿನ?
*****
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…