ಗಣಪತಿಯ ಸ್ತೋತ್ರ

ಗಂಧ ಕಸ್ತುರಿ ಪುನಗಽ |
ಗೌರವ್ವನ | ಕಂದಗ ಧರಿಸಿದರಽ |
ಅಂದದ ಬಿಳಿ‌ಎಲಿ ಆಡಕಿ ಕಾಚವು ಸುಣ್ಣ |
ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧||

ರಾಜಾನ್ನ ಕೆನೆಮಸರಽ |
ರುಚಿಗಾಯಿ | ಭೋಜನಕ ಸವಿಮಜ್ಜಿಗೆಽ |
ಸಾಜನಾಗಿ ಬಂದು ಸೆಳೆಮಂಚದಲಿ ಕುಳಿತು |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೨||

ಹಣ್ಣ ಹಪ್ಪಳ ಶೆಂಡಿಽಗಿ |
ಎಳಸಾದ | ಸಣ್ಣ ಶಾವಿಗಿ ಬಸೆದಽ |
ಉಂಡ ಮಗಿ ನೊರೆಹಾಲ ಉದರ-ಸಕ್ಕರಿ ತುಪ್ಪ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೩||

ಚಿಗುಳಿ ಚಿನ್ಪಾಲ್ ಬಚ್ಚೇವಽ |
ಚಿಟುಬಾಳಿ | ಅಗಲೋಳು ಗರಿಕಾಣೆನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೪||

ಸುರ ಹರಿ ನಮ ದೇವರ ಕಾಳಿಽ |
ಧೊರಿಪೂಜಿ | ಧೊರಿಪೂಜಿ ಮಾಽಡುನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೫||
*****

ಈ ಹಾಡಿನ ಮೊದಲನೆಯ ನುಡಿಯಲ್ಲಿ ಪೂಜೆಯ ಪರಿಯೂ ಮುಂದಿನ ಮೂರು ನುಡಿಗಳಲ್ಲಿ ನೈವೇದ್ಯದ ವಿಸ್ತಾರವೂ ವರ್ಣಿಸಲ್ಪಟ್ಟಿವೆ. ಕೊನೆಯ ನುಡಿಯು ಸಾಂಪ್ರದಾಯಿಕವಾಗಿದೆ.

ಛಂದಸ್ಸು: ಐದೈದು ಮಾತ್ರೆಯ ಗಣಗಳಿವೆ. ಮೊದಲನೆಯ ನುಡಿಯಲ್ಲಿ ಒಂದು ಡೊಡ್ಡ ಚರಣವು ಹೆಚ್ಚಿಗೆ ಬಿದ್ದಿದೆ.

ಶಬ್ದ ಪ್ರಯೋಗಗಳು: ಸಾಜ=ಶೃಂಗಾರ. ಸೆಳೆಮಂಚ=ತೂಗುಮಣೆ. ಸೋಬಸ್ತ=ಶೋಭಿಸುತ್ತ. ಏರಸ್ತ=ಏರಿಸುತ್ತೇನೆ. ಧೊರಿಪೂಜಿ=ವೈಭವದ ಪೂಜೆ. ಸೆಂಡೆಗಿ, ಹೆಪ್ಪಳ, ಶಾಂವಗಿ, ಚಿಗುಳಿ ಇವು ಭೋಜನದ ಪದಾರ್ಥಗಳು. ಚಿನ್ಪಾಲ್‌ ಮತ್ತು ಬಚ್ಚೇವ ಎಂಬವುಗಳೂ ಅವೇ. ಆದರೆ ಇವೆರಡರ ಸರಿಯಾದ ಕಲ್ಪನೆ ಮಾತ್ರ ಬರುವಂತಿಲ್ಲ.

“ಚಿಟುಬಾಳಿ ಅಗಲೋಳು ಗರಿ ಕಾಣೆನ” ಎಂದರೆ ಕಿರಿಬಾಳಿಯ ಎಲೆಯ ಮೇಲೆ ಎಡೆಬಡಿಸಿದ ಸಾಮಗ್ರಿಗಳು, ಎಲೆಯ ನಡುವಿನ ಗರಿ ಕಾಣದಷ್ಟು ತುಂಬಿದ್ದನೆಂದು ಅರ್‍ಥ.

ಈ ಹಾಡು ಪಾಂಚಾಲ ಜಾತಿಯವರಲ್ಲಿ ಪ್ರಚಾರವುಳ್ಳದ್ದಾಗಿರುವುದರಿಂದ ಅವರ ಆರಾಧ್ಯದೈವತವಾದ ಕಾಲೀದೇವಿಯ ಉಲ್ಲೇಖವು ಕೊನೆಯ ನುಡಿಯಲ್ಲಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಡದಿದ್ದರೆ ಮುನೇಶ್ವರ
Next post ನಾ ಕಂಡ ಕವಿ ಹೃದಯಿ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys