ಗೀತಾಚಾರ್‍ಯ

ಅರ್‍ಜುನನ ಹೃದಯದಲಿ ಪ್ರತಿಬಿಂಬಿಸಿದ ದೇವ
ಪರ್ಜನ್ಯನೊಲು ಆತ್ಮ ಸುಜ್ಞಾನಗಳ ತಿಳಿವ
ನಿರ್ಜೀವರಾದೆಮಗೆ ಧಾರೆಯೆರೆದೀ ಜಳವ
ವರ್ಜಿಸಿದೆ ಬೋಧಿಸುತ ನಿನ್ನ ವಚನಾಮೃತವ.

ಸೌಜನ್ಯ ಬೆಳೆ ಬಿತ್ತಿ ಬೆಳೆದೇರಿ ಪೂಫಲವ
ನಾರ್ಜಿಸಿದೆವಾವಿಂದು ನಿನ್ನ ಕೃಪೆಯಿಂದೋಲವ
ಪೂಜ್ಯಮಾದುದು ಸವಿದು ಗೀತಾ ಸುಧಾರಸವ.

ಒಂದೊಂದು ಮಾತಿನಲಿ ಹೃದಯವನೆ ತೆರೆಯಿಸುವೆ
ಎಂದೆಂದು ಮರೆಯದೊಲು ಸವಿಮಾತನಾಡಿರುವೆ
ಅಂದಿನಿನ್ನಿನ್ನೆವರ ಮುಂದೆಯುಂ ಸೊಗಯಿಸುವೆ
ಹಂದೆಗಳ ಹೇಡಿಗಳ ಹುರಿಮಾಡಿ ಮೆರೆಯಿಸುವೆ

ಮಂದಾರಮನ್ನಿತ್ತು ಲೋಕಮಂ ಬೆಳಗಿರುವೆ
ನಂದನೋದ್ಯಾನವನೆ ಜಗದ ಮೇಲಿಟ್ಟಿರುವೆ
ತಂದೆಯಲ್ಲಿಹುದೆಲ್ಲ ಸುರಭಿ – ಕಲ್ಪದ್ರುಮವೆ.

ಧರೆಯು ಕೆರ್‍ಚನು ಮರೆತು ಮೌಢ್ಯಮೇ ಪೆರ್ಚು ತಿರೆ
ಸರುವಕುಂ ತಾನು ಹೊಣೆಯನ ಗರುವ ಮೂಡುತಿರೆ
ಧರುಮ ಕರುಮಗಳಳತಯೇನೊಂದನರಿಯದಿರೆ
ಮೊರೆಯುತಿದೆ ನಿನ್ನಮೃತವಾಣತಾಮರೆಯದಿರೆ

ಕರುಣದಿಂದೀಕ್ಷಿಸಿದೆ ಕಲಿಯುಗವ ನೀನರರೆ
ಸರುವ ಲೋಕದೊಳೆಂದು ಮಾಸದಿಹ ಧರುಮ ಕರೆ
ಪರಮಪಾವನ ಶರಣು ಇರಲಿರಲಿ ಕೃಪೆಯ ಮರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಗಿದ ಕನಸುಗಳು
Next post ಕಂಪ್ಯುಟರ್

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys