ಸುವರ್‍ಣದೀಪ

ನನ್ನ ಮಿದುಳು ದಳವೇರಿ ದಳ್ಳಿಸಿತು ಸ್ವರ್‍ಣದೀಪ್ತಿ ಇಳಿಯೆ.
ಮನದ ಕರಿನೆರೆಯ ಹುಳುಗಳೆಲ್ಲ ಹೊತ್ತೇರಿ ನಿದ್ದೆ ತಿಳಿಯೆ.
ಜ್ಞಾನಮಯದ ಉದ್ದೀಪನಕ್ಕೆ ಪ್ರಜ್ವಲಿತವಾದ ಮೇಲೆ.
ಶಾಂತ ಕಾರ್‍ತಿಕದ ನಟ್ಟನಡುವೆ ಉರಿವಂತೆ ಪ್ರೇಮಜ್ವಾಲೆ.

ಕೊರಳಿಗಿಳಿದು ಬಂದಿರಲು ಆಹ! ಆ ನಿನ್ನ ಸರ್ಣದೀಪ
ವಾಣಿ ಇನಿದಾಗಿ ಮಾಗಿ ನುಡಿಯುತಿದೆ ಏಕರಾಗ ಭೂಪ.
ಶ್ರುತಿಯ ಮೀಟಿದರೆ, ಸ್ತೋತ್ರ ಜಲಧಿ ನಿನ್ನಡಿಗೆ ನುಗ್ಗಲುಂಟು
ಅಮೃತ ಕುಡಿದ ಗಂಧರ್‍ವಮತ್ತ ಗೀರ್‍ವಾಣ ಹಿಗ್ಗಲುಂಟು.

ನಿನ್ನ ಸ್ವರ್ಣದೀಪ್ತಿಯಲ್ಲಿ ಬೆಳಗಿತಿಗೊ ನನ್ನ ಹೃದಯ ಭಾಗ
ನಿನ್ನ ಶಾಶ್ವತದ ಉಸಿರು ಆಡುತಿದೆ ಪ್ರಾಣದಿಟುಕು ಜಾಗ.
ನಿನ್ನ ಸುತ್ತು ಕಟ್ಟಿತ್ತು ಈಗ ದೇಗುಲವೆ ರೂಪಗೊಂಡು
ಹೃದಯರಾಗಗಳು ಶಿಖರಗಟ್ಟುತಿವೆ ಧೂಪ ಎಂದುಕೊಂಡು.

ಪಾದಗಳಲಿ ಇಳಿದಿರಲು ನಿನ್ನದಾದಾ ಸುವರ್ಣದೀಪ
ನನ್ನ ಇಳೆಯು ಲೀಲಾಽಭೂಮಿ ನಿನ್ನಡಿಗೆ ಬಹು ಸಮೀಪ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವಿನಾಟ
Next post ವಾಗ್ದೇವಿ – ೩೨

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys