ಬಡಭಾರತಿಗೆ

ಏನುಬೇಡಲಿ ಬಂದು ಭಾರತಿಯೆ ನಿನ್ನ |
ಮಾನವಂತಿಯೆ ಜನನಿ ಸಲಹು ನೀನೆನ್ನ ||ಪಲ್ಲ||

ಬಂಗಾರ ಬೇಡುವೆನೆ ಬಳಿದೆಲ್ಲ ಪೋಗಿಹುದು |
ಶೃಂಗಾರ ಬೇಡುವೆನೆ ಶಿವನ ಮನೆಯು ||
ಮಂಗನಂತಿಹ ಮನವು ಇಂಗಿತವನರಿಯದಲೆ |
ಅಂಗಹೀನನ ತೆರದಿ ತಿರುಗುವದಕಂಡು || ೧ ||

ಅನ್ನವನು ಬೇಡುವೆನೆ ನಿನ್ನೆನಿನಗುಪವಾಸ |
ಅಣ್ಣನನು ಕೇಳುವೆನೆ ವನವಾಸವವಗೇ ||
ಇನ್ನೊಂದುಗಳಿಗೆಯನು ಬಾಳಿಕಳೆಯೆನುಯೆಂದು
ಸನ್ನು ತಾಂಗಳೆ ನಿನ್ನ ನಾ ಜವದಿ ಕಂಡು || ೨ ||

ಬೇಡುವೆನೆ ಸ್ವಾತಂತ್ರ್ಯ ಬಳಲುತಿಹಿ ಬಂಧನದಿ |
ಆಡುವೆನೆ ಸವಿಮಾತ ಅಳುತಿರುವಿ ತಾಯೇ ||
ಪೊಡವಿಯೊಳು ಒಡಲುರಿಯು ಸುಡುತಿಹುದು ತಡೆಯದಲೆ |
ಪೊಡಮಡುವೆ ಗಡಬಂದು ಸಲೆಪೊರೆವುದೆಂದು || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ನಡೆವ ದಾರಿ
Next post ವಚನ ವಿಚಾರ – ನೀನು ನಾನು

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys