ಭೂಕಂಪ


ಪೃಥ್ವಿಯ ಒಡಲೊಳಗಿರುತಿಹುದೇನು ?
ತಳಮಳ ಕಾಯ್ದಿಹ ಲಾವಾರಸವು !

ಭೂಮಿಯು ಗದಗದ ನಡುಗುತಿದೆ !
ಸಾಗರ ಕೊನೆ ಮೊದಲಾಗುತಿದೆ !
ಗಿಡವದು ಬುಡಮೇಲಾಗುತಿದೆ !
ಪಶುಗಳ ಪ್ರಾಣವು ಪೋಗುತಿದೆ !
ಮಾನವಕೋಟಿಯು ಮುಳುಗುತಿದೆ !
ಕಟ್ಟಡ ಕಟ್ಟಡ ಉರುಳುತಿದೆ !
ಪಟ್ಟಣ ಪಟ್ಟಣ ಪೋಗುತಿದೆ !
ಅಂಬರ ನೋಟವ ನೋಡುತಿದೆ !

ಏನಿದು ಭೀಕರ !
ದೃಶ್ಯ ಭಯಂಕರ !!

ಉಳಿಸುವರಾರು? ಬೆಳಿಸುವರಾರು?
ದೇವನ ಮನವನು ಗೆಲ್ಲುವರಾರು ?


ಹಿಂದೂದೇಶದೊಳಡಗಿಹುದೇನು ?
ತಾಪದ ಪಾಪದ ಪರಮನ್ಯಾಯ !
ನಾಡಿಗೆ ನಾಡಿದು ನಡುಗುತಿದೆ !
ರಾಜ್ಯದ ಬಿಗಿತನ ಬಿಚ್ಚುತಿದೆ !
ಸ್ವಾತಂತ್ರವು ಸಲೆ ಸಾಗುತಿದೆ !
ರಾಟಿಯ ಕೋಟಿಯು ಮುಳುಗುತಿದೆ !
ಬಡವರ ಒಡಲುರಿ ಹೆಚ್ಚುತಿದೆ !
ವಿಧವೆಯ ಶಾಪವು ತಟ್ಟುತಿದೆ !
ಜೀವನ ಕಟ್ಟಡವುರುಳುತಿದೆ !
ಭಾರತ ಕಣ್ಣಿಲಿ ಕಾಣುತಿದೆ !

ಎಲ್ಲಿಯನ್ಯಾಯ !
ಪರಮನ್ಯಾಯ !!

ಹೇಳುವರಾರು ? ಕೇಳುವರಾರು ?
ಸಮಾಜಗೋರಿಯ ಕಟ್ಟುವರಾರು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾಸಾ ಗೆಳೆಯರು
Next post ವಚನ ವಿಚಾರ – ಹೀಗೆ ಸಂತೋಷ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys