ವಿಶ್ವೇಶ್ವರನ ಎದುರಿನಲ್ಲಿ

ಮೈ ತೊಳೆದು ಗಂಗೆಯಲಿ ಮನವೆಲ್ಲ ಮಡಿಯಾಗಿ
ಅವಕಾಶವೆಲ್ಲವನು ತುಂಬಿದರು ದೇಗುಲದಿ
ಸಾಕಾರ ನಾಗಿರುವ ವಿಶ್ವೇಶ ನಿನ್ನಡಿಗೆ
ಶರಣಾಗಿ ಬಂದಿಹುದು ಈ ಜೀವ ಈ ಬಾಳ
ನಿನ್ನಡಿಗೆ ಮುಡುಪಾಗಿ ನಿಲಿಸುವಂತಹ ಮನವ
ನೀಡೆನೆಗೆ ಕಾರುಣ್ಯರೂಪನೇ! ತಾಮಸದ
ಕಜ್ಜಳವ ಕಳೆದೊಗೆದು ತ್ರಿಗುಣದಂಚನು ದಾಟಿ
ವಿಜ್ಞಾನದಾನಂದ ಸೀಮೆಯನು ಸೇರುವೊಲು
ರೂಪಿಸೈ ದಯೆಯಿಂದ ಭಗವಂತ ಬಲವಂತ!
ಅಬಲರಿಗೆ ಬಲವೀವೆ ನಿನಗೆಲ್ಲವೂ ಲೀಲೆ
ನೀ ಕೊಡಲು ನಿಂತಿರಲು ನಾನೇಕೆ ನಿರ್ಬಲನು?
ನನ್ನೆದೆಯ ಬಾನಿನೊಲು ಬಿತ್ತರಿಸಿ ಆತ್ಮದಲಿ
ವಾರಿಧಿಯ ಗಾಂಭೀರ್ಯವನ್ನು ತುಂಬಿ ಪರಮೇಶ
ದಿವ್ಯಕಜ್ಜಕ್ಕಾಗಿ ಕೈದುವೆನ್ನನು ಮಾಡು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೩
Next post ರಾವಣಾಂತರಂಗ – ೧೦

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys