ಕಂಪ್ಯುಟರ್

ತಾತ ನೀನು ಕಥೆ ಹೇಳಿರುವೆ
ನಿನಗೆ ಕಂಪ್ಯೂಟರ್ ಬಗ್ಗೆ ಹೇಳುವ

ಮೊದಲಿಗೆ ಒತ್ತಿ ಆನ್ ಗುಂಡಿ
ಬೆಳ್ಳಿ ಪರದೆ ಮೂಡಿತು ನೋಡಿ

ಇದಕ್ಕೆ ಹೇಳುವರು ಮೌಸೆಂದು
ಗಣಪತಿ ವಾಹನ ಇಲಿಯೆಂದು

ಕನ್ನಡ ನುಡಿ ಫಾಂಟಾವನ್ನು
ಗಣಕ ಪರಿಷತ್ತು ನೀಡಿದೆ.

ಕನ್ನಡ ನುಡಿಯ ಅಕ್ಷರಧಾಮ
ಇಲ್ಲಿವೆ ನೋಡಿ ಗಿಣಿ ರಾಮ

ಪತ್ರ ಲೇಖನ ಪದ್ಯಗಳನ್ನು
ಬರೆಯಬಹುದು ಬೇಕಾದಷ್ಟನ್ನು

ತಪ್ಪಾದರೆ ಡಿಲೀಟು ಬಟನ್ ಒತ್ತಲು
ಅಳಿಸಿ ಹೋಗುವುದು ಬರೆದುದೆಲ್ಲ

ಇಂಕು ಚೀತ್ಕಾಟ ಏನೂ ಇಲ್ಲ
ನೋಡಲು ಖುಷಿಯು ತೀರದಲ್ಲ

ಒಂದು ಹಾಳೆಯ ತಯಾರಿಕೆಗೆ
ಮರವೊಂದು ಸರಿವುದು ತೆರೆಗೆ

ಕಂಪ್ಯುಟರ್ ಬಳಕೆ ಮಾಡಿದರೆ
ಉಳಿವದು ಅರಣ್ಯ ನಮ್ಮ ಪಾಲಿಗೆ

ಪ್ರಾಣಿ ಪಕ್ಷಿ ನದಿ ಸಸ್ಯ ಉಳಿವಿಗೆ
ಬೇಕು ವನ ವನ ನಮ್ಮ ಬಾಳಿಗೆ

ಕಂಪ್ಯುಟರ್‌ದಿಂದ ಸುದ್ದಿಯನು
ಕಳಿಸಬಹುದೆಲ್ಲೆಡೆ ಕ್ಷಣದಲಿ

ಅಂಚೆ-ಗಿಂಚೆ ಬೇಕಿಲ್ಲ
ವಿಳಂಬ ಮಾತೇ ಇಲ್ಲ.

ಬಹೂಪಯೋಗಿ ಕಂಪ್ಯುಟರ್ ಜಾಲ
ನಮ್ಮಯ ಬದುಕಿನ ಊರುಗೋಲು
*****
೨೭.೦೯.೨೦೧೫

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೀತಾಚಾರ್‍ಯ
Next post ಎಷ್ಟೊಂದು ಅಬ್ಬರ, ಎಷ್ಟೊಂದು ನೊರೆ ತೆರೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys