ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾಳೆಯ ಮರದಡಿ
Next post ಮನವಿದ್ದೆಡೆ ಮಾರ್ಗ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys