ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಿಕ್ಷುಕಿ
Next post ಸಂಕ್ರಮಣ ಕಾಲ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys