ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣು ಮುಚ್ಚಾಟ!
Next post ಉಪದೇಶ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys