ಮೈ

ಈ ಮೈಯೆ ಒಮ್ಮೆ ಇಡಿ ವಿಶ್ವವೆಂದು ನನಗೇಕೊ ತೋರುತಿತ್ತು.
ಈಗ ಜೀವದೀ ಹೊಟ್ಟೆ ಪೂರ್ತಿ ಎನಿಸುವದು ಎರಡೆ ತುತ್ತು.
ಜಗದ್ವ್ಯಾಡ ಸಂಚಲನಕೀಗ ಇದು ಸಣ್ಣದೊಂದು ಸಂಚಿ
ಬೃಹದ್ಭೂಮಿಯಲಿ ಬೃಹತ್ತರದ ಆದರ್ಶಕೆಂದು ಹಂಚಿ

ಒಪ್ಪಿಡಿಯ ಕವಳ ಏತಕ್ಕೆ ಸಾಕು ಅದು ಮಹಾಸುರದ ಭಿಕ್ಷೆ
ಅನಂತತೆಯ ಸಂತತಿಯನುಂಡು ತೀರಿತು, ಆ ಬುಭುಕ್ಷೆ;
ಆ ಬುಭೂಕ್ಷೆ ಒಳಮಡಿಕೆಗಳಲಿ ತುಷ್ಣೀ೦ಭಾವವಾಗಿ
ದೇವರಾಯಸವು ಆಗಿ ಇಹುದು ಶಾಶ್ವತದ ಠಾವಿಗಾಗಿ.

ಅದರ ಇದಿರು ಮುಗಿದಿರದ ಹೊತ್ತು-ಗೊತ್ತೆಲ್ಲ ಮುಗಿಲ ತಬ್ಬಿ
ಮಾಡಿದ್ದೆ ಮಾಟ ಮಟ್ಟಿದ್ದೆ ಚಿನ್ನ ಎನುವಂತೆ ಘಟನೆ ಹಬ್ಬಿ
ಹೃದಯವನು ಹೊಕ್ಕು ಬ್ರಹ್ಮಾಂಡದುಕ್ಕು ಉಕ್ಕುಕ್ಕು ಮಧುರಪೂರಾ
ಅದರ ಮನವು ಹಾಕುವದು ಎಣಿಕೆ ಧ್ರುವೆನೆಡೆಗೆ ದೂರ ದೂರಾ.

ಇಟುಕುಮನೆಯ ವಾಮನನು ಬೆಳೆದ ಹೇಗೋ – ವಿಶ್ವಯೋಗಿ
ಈ ಪ್ರಪಂಚದೊಡನೊಡನೆ ಸಾಗಿ ವಿಶ್ವಾಕಾರನಾಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವಳ ಕಣ್ಣುಗಳು
Next post ಖಾಲಿ ಗಾದಿಯ ಕೈವಾಡ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys