ಆತ್ಮಾರ್ಥಿ-ಸ್ವಾರ್ಥಿ

`ಅಹಂಕಾರರಹಿತ ನಾನು ಮುಕ್ತ ಆತ್ಮನಂದನು-
ಸುಡಲಿ ಊಟ ಬರದು ಏಕೆ ಕೂಡಲೆ ತಾನೆ’೦ದನು.
ಅವನಿಗೆಂದೆ `ಏಕೊ ರೋಷ?’ `ಎಂಥ ರೋಷ ಎದರದು?
ಉದರದೇವ ಹಸಿದುಕೊಂಡ ಆ ಗರ್ಜನೆ ಆದರದು!’

`ಹೀಗೊ’ ಎಂದೆ- ‘ಹೌದು’ ಎಂದ `ಎಲ್ಲ ಆಟ ಅವನದು
ಹಸಿಯೆ ನುಸಿಯೆ ನನ್ನ ಬದುಕು ಶುದ್ಧ ಸ್ವಯಂಭವನದು
ಏನು ಆದರೇನು ನನಗೆ ಇಂದು ನಾಡಿದು’
`ನಿಜವೊ’ ಎಂದೆ ಅನ್ನರಾಗ ಎಳೆದು ಮತ್ತೆ ಹಾಡಿದು ?

`ಅಚ್ಚಾ’ ಎಂದಾ ‘ನಿನ್ನ ಶಂಕೆ ನನ್ನ ತಲೆಗು ಸೋ೦ಕಿತು
ಒಮ್ಮೆ ಮುಕ್ತ ಸದಾಮುಕ್ತ ಉಳಿದುದೇನು ಕೊಂಕಿತು ?
ಒದ್ದಾಡಿದೆ ಗುದ್ದಾಡಿದೆ ಕಾದ್ದಾಡಿದೆ ಆಗಲಿ
ಹಸಿವು ಹುಸಿವು ಕಸುವು ಕುಸಿವು ಹೇಗೊ ಹಾಗೆ ಸಾಗಲಿ

ಆತ್ಮಜ್ಞಾನ ಮುಕ್ತಗಾಸ; ಉಳಿದ ತಾನ ಮಾನವು
ತಾಳ ಬಿಡಲಿ, ಮೇಳ ಕೆಡಲಿ ಅದರದೇಕೆ ಭಾನವು ?’
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉನ್ಮಾದಿನಿ
Next post ವಾಗ್ದೇವಿ – ೪೧

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

cheap jordans|wholesale air max|wholesale jordans|wholesale jewelry|wholesale jerseys