ಹುಲಿ ಮತ್ತು ಹುಲ್ಲೆ

ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ
ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ
ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ
ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ
ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್ಮರ ಗಾಳಿಯೆ
ಮೊದಲೆ ನಿರ್ದಯವಾದ ಅದ್ಭುತ ಮತ್ತೆ ಕೆರಳಿದರೆಂತೆನೆ
ಉಸಿರನಡಗಿಸಿ ಭಯದಿ ನಡುಗುತ ಕಾಣ ಕಾಣುತ ಜಾರಿದೆ
ಮಹಾಮೃಗವಗೊ ಹೇಗೆ ಸಾಗಿದೆ ಬಾಗಿ ನಯಭಯಮಯದಲಿ
ಸೌಮ್ಯ ಸೌಂದರ್ಯವನ್ನು ನಶಿಸಲು ರೌದ್ರ ಸುಂದರ ನಯದಲಿ.

ಮುಗ್ಧ ಮೃಗವಧು ತನ್ನ ಕಾಲಿಲೆ ಮರಣವಿದ್ದೆಡೆ ಸಾಗಿದೆ
ಬನದ ತಣ್ನೆಳಲಲ್ಲಿ ತಿಳಿಗೊಳದಲ್ಲಿ ನಿರ್ಭಯ ಬಾಗಿದೆ
ಪಾಪ, ಸಂಶಯವೆಂಬುದೇ ಗೊತ್ತಿಲ್ಲ ನಂಬುಗೆ-ಜೀವಕೆ
ಆಚೆ-ಈಚೆಗೆ ನೋಡದೇ ನಾಲಗೆಯ ಚಾಚಿರೆ ತೇವಕೆ
ಹಾರಿ ಜಿಗಿದಿತು ಮೇಲೆ ಒಗೆದಿತು ಹುಲಿಯು ಹುಲ್ಲೆಯ ಹೀರಿತು
ಅಯ್ಯೋ ಬಿದ್ದಿತು, ಭಕ್ಷವಾಯಿತು, ಆಯಿತೋ ಬಾಳಾಯಿತು,
ಗಹನ ಗುಹೆಯಲ್ಲಿ ಒಂಟಿ ಇಹ ಸಖನನ್ನೆ ನೆನೆಯುತ ತೀರಿತು
ಅದೇ ಸುಖದಲಿ ಮೃತ್ಯುಮುಖದಲಿ ಹುಲ್ಲೆ ಓ ಹಾಳಾಯಿತು
ಹಾರಿ ಜಪ್ಪಿಸಿ ಕೊಲುವ ಕೌಶಲವಿರಲಿ ಆರ್ಭಟಿ ಇಂದಿನ
ಆದರೂ ಬಂದೀತು ಎಂದೋ ಹುಲಿಯ ಲಯವಾದೊಂದಿನ.

ನೆಲವ ಲಟಲಟ ಮುರಿಯೆ ಮೆಟ್ಟಿದ ಪೆಡಂಭೂತಗಳೆಲ್ಲಿವೆ?
ನೆರಳ ತಂಗೊಳ ಜಲವ ಕುಡಿದುಳಿದಾವು ಹರಿಣಗಳಿಲ್ಲಿಯೇ!
ಪ್ರಬಲ ಬಲಿಯೇ ತನ್ನ ಬಲಭರಭಾರದಲ್ಲಿಯೆ ಮಡಿವನು
ಬದುಕಿನೊಡೆಯನು ಸತ್ತನೆನಿಸಿದ ಸತ್ಯಸಂತತಿ ಜೀವನು
ಕೊಲ್ಲಬಲ್ಲವ ಮೆಲ್ಲಮೆಲ್ಲನೆ ಮೃತ್ಯು ಪಂಥವ ಹಿಡಿವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನದ ಮಾತು
Next post ವಾಗ್ದೇವಿ – ೪೮

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys