ಜೀವನ ಚಿತ್ತಾರ

ನಾನು ಚಿತ್ರಿಕನಲ್ಲ
ಆದರೂ ಬಾಳಿನೊಂದು ಹಾಳೆಯಲಿ
ಚಿತ್ತಾರ ಬರೆಯ ಬಯಸಿದೆ.
ನನ್ನ ಬೆರಳುಗಳಲ್ಲಿ ರೇಖೆಗಳನ್ನೆಳೆಯುವ ಕಸುವಿಲ್ಲ
ಕುಸುರಿ ಕೆಲಸದ ಚತುರತೆಯಿಲ್
ಬಣ್ಣಗಳ ಬಾಂಡಲಿಯೂ ನನ್ನಲ್ಲಿಲ್ಲ.
ಆದರೂ ಆಸೆ –
ಬಾಳ ಕೊನೆಯ ಸಂಪುಟದ ಒಂದು ಹಾಳೆಯಲಿ
ಜೀವನ ಚಿತ್ತಾರ ಬರೆಯುವಾಸೆ.
ಯಾವ ಚಿತ್ತಾರ ಬರೆಯಲಿ?

ಪ್ರೀತಿ, ಪ್ರೇಮ, ಪ್ರಣಯ?
ಇಲ್ಲ, ಎಲ್ಲರೂ ಬರೆಯುತ್ತಾರೆ ಅದನ್ನು?!
ಆದರೆ ಯಾರಿಗೂ ಅರ್ಥವಾಗದ
ಬಣ್ಣ ಬಣ್ಣದ ಗೋಜಲದು.

ಸಾವು, ನೋವು, ಆಗಲಿಕೆ, ದುಃಖ?
ಇಲ್ಲ. ಇದು ಎಲ್ಲರ ಬಾಳಲ್ಲೂ
ಬರೆಯಲಾಗುವ ಕರಿಬಣ್ಣದ ಚಿತ್ರಗಳು
ಅದರಲ್ಲೇನಿದೆ ವಿಶೇಷ?

ಸತ್ಯ, ನ್ಯಾಯ, ನೀತಿ, ಧರ್ಮ?
ಇಲ್ಲ. ಇದಕ್ಕೆಲ್ಲ ಈಗ ಅರ್ಥವೇ ಇಲ್ಲ.
ಕ್ರೌರ್ಯ, ಕೊಲೆ, ಸುಲಿಗೆ, ಅತ್ಯಾಚಾರ?
ಇಲ್ಲ. ಈಗ ಎಲ್ಲೆಲ್ಲೂ ಅದೇ ಚಿತ್ರ.

ಮತ್ತಾವ ಚಿತ್ತಾರ ಬರೆಯಲಿ?
ಭವಿಷ್ಯದ ಚಿತ್ರ ಅದಾಗಬೇಕು
ಜೀವನ ಪ್ರೀತಿ ಅಲ್ಲಿರಬೇಕು
ರೇಖೆಗಳ ಸಿಕ್ಕುಗಳಿಲ್ಲದ, ಬಣ್ಣಗಳ ಗೊಂದಲಗಳಿರದ
ನನ್ನ ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳು
ನೋಡಿ ಅರ್ಥಮಾಡಿಕೊಳ್ಳಲಾಗುವ
ಯಾರಕಾಲಕ್ಕೂ ಮುಂದುವರಿಸಲಾಗುವ
ಚಿತ್ತಾರ ಅದಾಗಬೇಕು.

ವಿಶ್ವ ಪ್ರೇಮದ ಚಿತ್ರ,
ಪರಿಸರಮಾಲಿನ್ಯವಿರದ ಚಿತ್ರ
ತಂಪು ಗಾಳಿಯ ಸ್ಪರ್ಶಕೆ
ಮರಗಿಡಗಳು ತೊನೆದಾಡುವ ಚಿತ್ರ
ಹೂಗಳು ನಲಿದಾಡುವ ಚಿತ್ರ
ಜಾತಿ ಮತ ಭೇದ ಭಾವಗಳಿಲ್ಲದೆ
ಎಲ್ಲರೊಂದಾಗಿ ನಲಿಯುವ ಚಿತ್ರ
ಮಕ್ಕಳ ಮುಖ ತುಂಬ ನಗುಚೆಲ್ಲುವ ಚಿತ್ರ
ಅವರಿಗಿಷ್ಟವಾದ ಗೆರೆ ಎಳೆದು ಬಣ್ಣ ತುಂಬಿದರೂ
ಹಾಳಾಗದ ಚಿತ್ರ ಅದಾಗಬೇಕು.

ನಾ ಬರೆವ ಚಿತ್ರ ಜೀವಂತಿಕೆಯ ಪುಟಿಸುವ
ಜೀವನದ ಮುಂದುವರಿಕೆಯ ಚಿತ್ರವಾಗಬೇಕು,
ಮನಕ್ಕೆ ತಂಪು ನೀಡುವ ಚಿತ್ತಾರವಾಗಬೇಕು
ಎಂದು ಬಯಸುತ –
ಯಾವ ಮುಖವಾಡಗಳಿಲ್ಲದೆ ನಾನೇ ನಾನಾಗಿ ನಿಂತು
ನನ್ನ ಬಯಕೆಯ ಚಿತ್ತಾರ ಬರೆಯಲು
ರೇಖೆಗಳ ಬಣ್ಣಗಳ ಹುಡುಕತೊಡಗಿದೆ.
ರೇಖೆಗಳು ಬಣ್ಣಗಳು ಕೈಗೆ ಸಿಗಲಿಲ್ಲ;
ಬರೆಯ ಬೇಕೆಂದು ಬಯಸಿ ರೂಪಿಸಿದ ಚಿತ್ರ
ಹಾಳೆಯಲಿ ಮೂಡಿ ಬರಲೇ ಇಲ್ಲ.
ಹಾಳೆ ಖಾಲಿಯಾಗಿಯೇ ಉಳಿಯಿತು!
ಇನ್ನೊಬ್ಬ ಚಿತ್ರಕನ ಕಾಯುತ್ತಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನಿಂದ ದೂರವಾಗಲು ಮಾಡು ಏನೆಲ್ಲ
Next post ಎರಡು ಸೇರೆ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys