ಹೊಸಕವಿತೆ
ಬರೆಯ ಹೊರಟಾಗ
ನನಗರಿವಾಯಿತು
ನನ್ನೊಡಲು ಬರಿದಾಗಿದೆಯೆಂದು!
ಹಳೆಯ ಕವಿತೆಗಳೆಲ್ಲ
ಸತ್ತು ಹೋಗಿದ್ದವು
ಹೊಸ ಹುಟ್ಟಿಗೆ
ಜೀವ ಭಾವ ಕಾದುಕೊಂಡಿತ್ತು
ಆದರೆ ಹೊಸ ಕವಿತೆ ಹುಟ್ಟಲಿಲ್ಲ!
ಮನಸ್ಸು ಭಾವದ ಸಂಭೋಗವಾದರೂ
ಹೊಸಹುಟ್ಟು ಉದಯಿಸಲಿಲ್ಲ.
ಹೇಗೆ ಕಳೆಯಲಿ ಈ ಬಂಜೆತನ?
ಮನಸ್ಸು ಖಾಲಿಯಾದ
ಭಾವ ಬರಡಾದ ಈ ಜಡತನ?
ಹೊಸ ಕವಿತೆ ಹುಟ್ಟಬೇಕು
ಸತ್ತು ಹೋದ ಹಳೆಕವಿತೆಗಳಿಗೆ
ಮತ್ತೆ ಜೀವ ತುಂಬಬೇಕು.
ಯಾವ ಭಾವ ವೀರ್ಯ
ಕಳೆಯಬಹುದು ಮನದ
ಈ ಬಂಜರುತನ?
*****
Related Post
ಸಣ್ಣ ಕತೆ
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…