ಎಲ್ಲಿದ್ದಾನೋ ಹಾಳಾದವನು

ಆ ವಿಳಾಸವಿಲ್ಲದ ಅಲೆಮಾರಿ
ಎಂದಿನಂತೆ ಜನಜಂಗುಳಿಯ
ಮಧ್ಯೆ ಸಿಕ್ಕ.
ಅವನು ಸಿಗುವುದು ಅಲ್ಲೇ
ಆ ಏಕಾಂತದಲ್ಲೇ.

ಅದೇಕೋ ಇಂದು
ನನ್ನ ಕಂಡವನೇ
ತನ್ನ ಜೋಳಿಗೆಗೆ
ಕೈ ಹಾಕಿ ತಡಕಿ
ಲಾಲಿಪಪ್ಪಿನ ಕಡ್ಡಿಯೊಂದನ್ನು
ತೆಗೆದು ಕೈಯಲ್ಲಿ ಹಿಡಿದು
ಮುಂಚಾಚಿ, ನಕ್ಕ.

ಎಂದೂ ಭಿಕ್ಷಕ್ಕೆ ಕೈಯೊಡ್ಡದವಳು
ಮೋಡಿಗೊಳಗಾದವಳಂತೆ ಕಸಿದು
ಬಗಲ ಚೀಲಕ್ಕೆ ಎಸೆದು
ಬಿರಬಿರನೆ ನಡೆದೆ.
ಇನ್ನೂ ಕೊಳ್ಳುವುದಕ್ಕಿತ್ತು
ತೆಂಗು, ತರಕಾರಿ, ಸಂಬಾರ……

ಕೆಲಸ ಬೆಟ್ಟದಷ್ಟಿತ್ತು.
ಆಗಲೇ ತಡವಾಗಿತ್ತು
ಗಂಡ ಮಕ್ಕಳೂ
ಮನೆಯಲ್ಲಿ ಕಾಯುತ್ತಿರಬಹುದು…..

ಮನೆಗೆ ಬಂದು
ಚೀಲ ಸುರುವಿ
ಎಲ್ಲ ವಿಂಗಡಿಸಿಡುವಾಗ
ಹಸಿಮೆಣಸಿನ ಮರೆಯಲ್ಲಿ
ಮೆಲ್ಲನಿಣುಕುತ್ತಿತ್ತು ಲಾಲಿಪಪ್ಪಿನ ಕಡ್ಡಿ!

ಮೇಲಿನದೆಲ್ಲಾ ಹೇರಿಕೆ
ಸರಸರನೆ ಸರಿಸಿ
ಕಡ್ಡಿಯೆಡೆಗೇ ಕೈ ಹೋಗುವುದೇ?

ತಿರುಗಿಸಿ ಮುರುಗಿಸಿ ನೋಡುತ್ತಾ
ಮುಟ್ಟುತ್ತಾ ಮೂಸುತ್ತಾ
ಒಳಗಿನ ಮಗುವೆದ್ದು
ಬೆರಗಿನಲಿ ಆಟವಾಡುತ್ತಿರಲು
ನವಿಲು ಬಣ್ಣದ ಸಿಪ್ಪೆ ಬಿಡಿಸಿದೆ

ಗಾಢ ಗುಲಾಬಿ ಬಣ್ಣದ ಗೋಲಿಗೆ
ಕಡ್ಡಿಸಿಕ್ಕಿಸಿದ್ದಾರೆ ಯಾರೋ
ನೋಡಿದೊಡನೆ ಚಪ್ಪರಿಸಬೇಕೆನಿಸುವ
ಉಮೇದು ಹುಟ್ಟಿಸುವ
ಸುವಾಸನೆ ಮೆತ್ತಿದ್ದಾರೆ ಯಾರೋ
ತಡೆಯಲಾಗದೇ ಬಾಯಿಗಿಟ್ಟುಕೊಂಡೆ
ಲಾಲಿಪಪ್ಪಿನೊಂದಿಗೇ
ಕರಗುತ್ತಾ ಹೋದೆ.

ಆಗಲೇ ಅವನಿಗೊಂದು
ವಂದನೆ ಹೇಳಲೂ ಮರೆತೆನಲ್ಲಾ!

ಛೇ! ಎಲ್ಲಿದ್ದಾನೋ ಹಾಳಾದವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಷರವಿಧಾನ
Next post ಮನ ಮಂಥನ ಸಿರಿ – ೪

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys