ಬೈರಾಗಿಯ ಜಡೆ


ಹೊತ್ತು ಕಂತುವ ಮೊದಲೇ
ನಿನಗೆ ಜಡೆ ಹೆಣೆದು
ಮುಗಿಸಲೇಬೇಕೆಂಬುದಿವರ
ಉಗ್ರ ಆದೇಶ.
ನೀನೋ ಅಂಡಲೆವ ಬೈರಾಗಿ!

ನಿಂತಲ್ಲಿ ನಿಲ್ಲುವವನಲ್ಲ
ಕೂತಲ್ಲಿ ಕೂರುವವನಲ್ಲ
ಕ್ಷಣಕ್ಕೊಮ್ಮೆ ಧಿಗ್ಗನೆದ್ದು
ಗರಗರ ದಿಕ್ಕು ತಪ್ಪಿ ತಿರುಗುವ
ವಾಚಾಳಿ ಪಾದದವನು!
ನನ್ನ ಯಾವ ಮಿಕ್ಕುಳಿದ ಋಣವೋ
ನನಗೆ ಮೆಟ್ಟಿದ ಪ್ರಿಯ ಪಿಶಾಚಿ ನೀನು!


ಪುಸಲಾಯಿಸಿ ಗೋಗರೆದು
‘ಬಾರಪ್ಪ ಬಾ ಜಾಣ
ಸುಮ್ಮನೆ ಕೂರೋ ನನ ದೇವಾ
ದಮ್ಮಯ್ಯ ಅತ್ತಿತ್ತ ಅಲುಗಬೇಡ’
ಕಾಡಿಬೇಡಿ ಎಳೆ ತಂದು
ಕುಕ್ಕರ ಬಡಿಸಿದರೂ
ಕತ್ತು ಆಕಾಶಕ್ಕೊಮ್ಮೆ
ಇನ್ನೊಮ್ಮೆ ಭೂಮಿಗೆ
ನನ್ನ ಸಹನೆ ಬೆಂಕಿಗೆ!

ಅದೆಷ್ಟೋ ಕಾಲದಿಂದ
ಎಣ್ಣೆ ಬಾಚಣಿಗೆ ಸೋಕದೇ ಸೊಕ್ಕಿ
ಜಡೆಗಟ್ಟಿದ ನಿನ್ನ ಕೂದಲೋ
ದಂಡಕಾರಣ್ಯ
ಎಲ್ಲಿ ಹೊಕ್ಕು ಹೇಗೆ ಬಿಡಿಸುವುದೋ
ಪರಮ ಸಿಕ್ಕು.


ಇವರದೋ ಒಂದೇ ಆಗ್ರಹ
ಹೊತ್ತು ಮುಳುಗುತ್ತಿದೆ
ಬೇಗ ಮುಗಿಸು
ಬೇಗ ಮುಗಿಸು.

ಅದೇನು ಅಂತಿಂಥಾ ಜಡೆಯೇ
ಹೆಣೆದು ಬಿಸಾಡಲು?
ಹೆಣೆಯ ಬೇಕೀಗ
ಸಹಸ್ರ ಕಾಲಿನ ಜಡೆಯೇ
ಸಹಸ್ರ ನಡೆಯ ಪಾದದೆಜಮಾನನಿಗೆ!

ತಲೆ ಅಲುಗಿಸದೇ
ಸುಮ್ಮನೆ ಕೂರೋ ಮಹಾರಾಯ
ಈಗಿನ್ನೂ ಪುಂಡ ಕೂದಲಿಗೆ
ಎಣ್ಣೆ ಮಿದಿಯುತ್ತಿದ್ದೇನೆ.
ಉಂಡೆಗಟ್ಟಿದ ಸುರುಳಿ
ಗುಂಗುರು ಕೂದಲ
ಎಳೆ ಎಳೆ ಬಿಡಿಸಿ
ಹುಡಿ ಮಾಡಿ
ನಯಗೊಳಿಸಬೇಕಿದೆ.
ಇನ್ನಾಮೇಲೆ ತಾನೇ
ಜಡೆ ಹೆಣಿಗೆ?


ಛೇ! ಕೊಂಚ ತಾಳಿಕೊಳ್ಳಿ
ಬೈರಾಗಿಯೇನೋ ಸರಿಯೇ ಸರಿ
ನಿಮ್ಮದೂ ವರಾತವೇ?
ಕಾಣುತ್ತಿಲ್ಲವೇ ನನ್ನ
ಸಮರ ತಯಾರಿ!
ಕೈ ಕಾಲು ಹರಿಯುತ್ತಲೇ ಇಲ್ಲ.
ಅಯ್ಯೋ ಹೊತ್ತು ಮೀರುತ್ತಿದೆಯಲ್ಲಾ.


ಅದೇನು ಶುಭಲಗ್ನವೋ
ಈಗ ನೀನೂ ಸುಮ್ಮನೆ ಕುಳಿತಿದ್ದೀಯ
ಹಠಮಾರಿ ಕೂದಲೂ ನೋಡು
ಮೆತ್ತಗಾಗಿ ಹೇಳಿದಂತೆ ಬಾಗಿ ಬಳುಕುತ್ತಿದೆ.
ಕೂದಲ ಜೊಂಪೆ ಇಷ್ಟಿಷ್ಟೇ ವಿಂಗಡಿಸಿ
ಒಂದು ಪಾದ, ಎರಡು ಪಾದ
ಮೂರು ಪಾದ, ನಾಲ್ಕನೆಯದು…….
ನೂರು ಇನ್ನೂರು
ಹ್ಹಾ.. ಸಹಸ್ರವೋ ಮತ್ತೂ ಮೇಲೆಷ್ಟೋ……..
ಜಡೆ ಹೆಣೆಯುತ್ತಾ ಹೆಣೆಯುತ್ತಾ
ಎಚ್ಚರದಲಿ ಮುಳಗಿ ಹೋಗಿದ್ದೇನೆ.
ಬೈರಾಗಿಗೇ ಮೈಮರೆವ ಜೊಂಪು!
ಯಾವ ಮಂಕುಬೂದಿಯೋ
ಇವರೋ ಮೂರ್ಚೆಹೋಗಿದ್ದಾರೆ
ಸೂರ್ಯ ಜ್ವಲಿಸುತ್ತಲೇ ಇದ್ದಾನೆ
ಹೊತ್ತಿಗೆ ಮುಳುಗುವುದೇ
ಮರೆತು ಹೋಗಿದೆ!


ಬೈರಾಗಿಗೆ
ಜಡೆ
ಹೆಣೆಯುತ್ತಲೇ
ಇದ್ದೇನೆ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತಿಹಾಸೋತ್ತರ ಕಥಾನಕಗಳು
Next post ಮನ ಮಂಥನ ಸಿರಿ – ೧೪

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys