ಬೇಡವೆನಗಿನ್ನೇನು!

ಮಾಲಕಂಸ

ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ
ಹಡೆದಮ್ಮ ಕೂಗಿದಳು: “ಹುಡುಗಿ ಇಲ್ಲಿಗೆ ಬಾರೆ!”
ಜಡಭಾವದಿಂದ ಎಳೆದಿಡುತಲಡಿಗಳನು
ನಡೆದು ಅವಳೆಡೆಗೆ ಕೇಳಿದೆ: “ಕರೆದುದೇನು?”
ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು
“ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು
ಹರಡಿರುವ ಒಡವೆಗಳನೆಲ್ಲ ತೋರಿದಳು,
ಬೆರತು ನಾ ನಿಂತೆ ಬೆರಳಿರಿಸಿ ಬಾಯಿಯೊಳು.
ಬಣ್ಣ ಬಣ್ಣದ ಸೀರೆ ಹೊನ್ನ ಹೂ-ರವಿಕೆಗಳು!
ರನ್ನದೋಲೆಯು ಮುತ್ತು ಚಿನ್ನ ದಾಭರಣಗಳು!
ಕುಸುರು ಕುಸುರಿನ ಹವಳ ಬೆಸೆದ ಕಂಕಣವು!
ಹಸನು ಹೊಗರುಗುವ ಕಾಲ್‌ಕಡಗ ಪೈಜಣವು!
ಬಗೆಬಗೆಯ ಕೆಮ್ಮೆಣ್ಣೆ ಸೊಗಸೆನಿಪ ಪನ್ನೀರು!
ಮೃಗಸಾರ ಕರ್ಪೂರ ಅಗುರು-ಗಂಧದ ತಿಗುರು!
ಹಣ್ಣು ಹಂಪಲವು ಸವಿಯನ್ನ ದಿನಿಸುಗಳು!
ಕಣ್ಣ ಸೆಳೆಯುವ ಹಲವು ಬಣ್ಣದರಳುಗಳು!
ನೋಡಿದೆನದೆಲ್ಲವನು, ನೋಡಿಯೇ ನೋಡಿದೆನು,
ಕೂಡಿಸಿದೆನದರಲಿಯೆ ನೀಡಿರುವ ನೋಟವನು.
‘ಎಲ್ಲವೂ ನನ್ನದಿದು’ ಎಂಬುದನ್ನು ನೆನೆದು
ಉಲ್ಲಸವು ಆಟವಾಡಿತು ಮನದಿ ಕುಣಿದು.
ಹಿಂಡುಹಿಂಡಾಗಿ ಹೆಣ್ಣುಗಳಲ್ಲಿಗೈತಂದು
ಕೊಂಡಾಡತೊಡಗಿದರು ನನ್ನ ದೈವವನಂದು.
ಕೊರೆಯುವೆದೆನೋವೆಲ್ಲ ಹೇಗೋ ಮರೆಯಾಯ್ತು
ಗರುವಿಕೆಗೆ ಮೈ-ಮನವದಾಗ ಸೆರೆಯಾಯ್ತು.
ಉಡುಗೆಯುಡಬಯಸಿದೆನು, ತೊಡಿಗೆಯಿಡಬಯಸಿದೆನು,
ಮುಡಿಬಿಗಿದು ಬೆಡಗಿನೊಳು ಮುಡಿವೆನೆಂದೆನು ಅರಳು,
ತಂಪು ಬಾವನ್ನದಣ್ಪನು ಮೈಗೆ ತೀಡಿ
ಸೊಂಪಾಗಿರುವೆನೆಂದೆ ಸವಿಯುಣಿಸನೂಡಿ.
‘ಮುಂದೇನು? ಮುಂದೇನು?’ ಎಂದು ಯಾರೋ ಕೇಳಿ-
ದಂದ ಕಿವಿದೆರೆಗೈದಲೆದೆಯು ಜುಽಮ್ಮನು ತಾಳಿ
ತನುವೊಮ್ಮಿದೊಮ್ಮೆಯೇ ನವಿರಿಗೊಳಗಾಯ್ತು,
ಇನಿಯ ನಿನ್ನಯ ನೆನಹೆ ಮನತುಂಬಿ ಹೋಯ್ತು.
ಬಿಡುಬಿಡರಿತೆನು ನಿನ್ನ ಹುಡುಗಾಟವೆಲ್ಲವನು
ಹಡೆದಮ್ಮ ಹೇಳಿದಳು: ಒಡವೆಯಿವನೆಲ್ಲವನು
ನೀನೆ ನನಗಾಗಿಯೇ ಕಳುಹಿರುವೆಯಂತೆ!
ಏನು ಈ ಮೊಡಿಯಾಟವನೆಲ್ಲಿ ಕಲಿತೆ?
ತೊಡೆಯಲಿಕೆ ನೆನಹನೀನೊಡವೆಗಳ ಕಳುಹಿಸಿದೆ,
ಜಡಮತಿಯು ನಾನರಿವುಗೆಡುತನಕೆ ಬೆರಗಾದೆ.
ನಿನ್ನ ಮರಸುವ ಚಿನ್ನ ರನ್ನದೊಡಿಗೆಗಳು
ಮಣ್ಣುಗೂಡಲಿ ಹಾಳು ಬಣ್ಣದುಡುಗೆಗಳು!
ಬೇಡವೆನಗಿನ್ನೇನು! ಬೇಡವೆನಗಿನ್ನೇನು!
ಓಡಿ ಬಾ ದೊರೆಯೆ, ನೀನೇ ಬೇಕು ನೀನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ನಿನಗೆ ಋಣಿಯಾಗಿ
Next post ಅದು ಅದುವೆ ಯುಗಾದಿ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys