ತಾಯಿಯ ಒಲವು

ಜಗದ ತೇಜಮಿದೆಂದು ಇದ ಸಲಹಬೇಕೆಂದು
ಜನನಿಯಾದಳು ತಾಯಿ ನೋವು ಹಲವನು ತಿಂದು
ಹೊಸ ಜೀವವವಳಿಂದ ಕಳೆಗೂಡಿ ಮೈದುಂಬಿ
ಧರೆಗಿಳಿದು ಬಂದಿಹುದು ಅವಳ ಕರುಣೆಯ ನಂಬಿ.

ಗೇಣುದ್ದ ದೇಹದಿಂ ಬಂದ ಶಿಶುವಂ ಹಾಡಿ
ಬೇನೆಗಳ ಲೆಕ್ಕಿಸದೆ ಬೆಳೆಸಿದಳು ಮೊಲೆಯೂಡಿ
ಕುಲಕೋಟಿಯನು ಕಾಯ್ವ ದಿನಮಣಿಯು ನೀನೆಂದು
ತಾಯಾಗಿ ನೋಡಿದಳು ತನಗೆ ಮಗು ಬೇಕೆಂದು.

ಶಿಶುವಿರುವ ತಾಯಿಯೇ ಧನ್ಯೆ ಲೋಕದೊಳೆಂದು
ಹಲವು ಜನ್ಮಾಂತರದ ಸುಕೃತಫಲ ಮಗುವೆಂದು
ಹೊಳೆ ಹೊಳೆವ ಬೆಳ್ಜಸದ ಕೊಡೆಯೊಳಗೆ ಬಾಳೆಂದು
ನಲವಿಂದ ಹರಸುವಳು ಇರದಿರದೆ ತಾ ಬಂದು.

ತಾಯ ಕಣ್ಣಿನ ಮುತ್ತು-ಹೃದಯ ಕಮಲದ ಮುತ್ತು
ಅವಳ ನಲ್ಮೆಯ ಸ್ವತ್ತು-ಸುಖದ ಸೊಬಗಿನ ಸ್ವತ್ತು
ಅಳುವ ಬಾಯಿಯ ಬಿತ್ತು-ಹವಳ ತುಟಿಗಳ ಮುತ್ತು
ತನ್ನೆದೆಯ ಸವಿಯಿತ್ತು-ನೋಡುವಳು ಮನಮಿತ್ತು.

ಈ ಶಕ್ತಿ ಈ ಬುದ್ದಿ ಈ ತನುವು ಈ ಮನವು
ಅವಳ ಹರಕೆಯ ಹಾಲು ಈ ಕೀರ್ತಿ ಸದ್ಗುಣವು
ಅವಳ ರಕ್ತದ ಪಾಲು, ತಾಯ್ನಿಂದ ನೆಲದೊಲವು
ಭಾರತ ತಪಸ್ವಿನಿಯ ಕಣ್ಣಂಗಳದ ನಲವು.

ನುಂಗುವಳು ತಪ್ಪುಗಳ – ತಿದ್ದುವಳು ತೋರುವಳು
ತೊದಲು ಮಾತುಗಳಿಂದ ಹಿಗ್ಗಿ ಹಿರಿದಾಗುವಳು
ಪೂಗಾಯಿ ಹಣ್ಣಾಗಿ ಸವಿಗೂಡಿತೆನ್ನುವಳು
ಸಿಂಗರಿಸಿ ಮನದಣಿಯೆ ಹಾಡುವಳು ನೋಡುವಳು.

ಈ ಹೂವು ನಿನದೆಂದು ದೇವರಡಿಯೊಳು ನಿಂದು
ಬೆಳಕಿತ್ತು ಬಾಳಿತ್ತು ಇದ ನಿತ್ಯ ನೋಡೆಂದು
ಈ ಜೀವ ಹಸನೆನಿಸಿ ಆತ್ಮದೊಳು ಮೂಡೆಂದು
ಒಂದು ಮನದಲಿ ಬೇಡಿ ಕಾಪಿಡುವಳೆಂದೆಂದು.

ಆರರಿವರೀ ಪ್ರೇಮ ನೇಮ ಧರ್ಮದ ಗುಟ್ಟು
ನಾರಿಯರ ಹೃದಯವೇ ತಾಯಿಯೊಲವಿನ ಮಟ್ಟು
ಒಂದು ಬೀಜವನಿಟ್ಟು ಬೆಳಸುವಳು ಉಸಿರಿಟ್ಟು
ಹಸುರನೆರಚುವಳೆಲ್ಲ ಲೋಕದೊಳು ಕೈಬಿಟ್ಟು.

ಹಲವು ದೇವರನೇಕೆ ಪೂಜಿಸುತ ಅಳಬೇಕು
ನಲಿವ ಮಾತೆಯ ನೋಡಿ ಅವಳ ಪೂಜಿಸಬೇಕು
ಸತ್ಯ ಭೂಮಿಯ ಪುತ್ರಿ ನಮ್ಮ ಬದುಕಿನ ಬೆಳಕು
ಪದಸರೋಜದೊಳೊಂದು ಹೂವನಿರಿಸಲಿಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಶಾಕಿರಣ
Next post ರಂಗನ ನಾಯಿ ಮರಿ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys