ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು
ಇರುಳಿನಲಿ ಭಯವೆರಸಿ ದಾರಿ ಮರೆದಿಹುದು
ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು
ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು.

ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ
ಕಳೆದೊಗೆದ ಸಿಪ್ಪೆಯೊಲು ಬಾಳಲರಿವಿಲ್ಲ
ಏನಪಾಯವು ಬಹುದೊ ಸೆರೆಯಲ್ಲದಿನ್ನಿಲ್ಲ
ಕಾಣದಿಹ ದಿಕ್ಕುಗಳ ನೋಡುತಿಹುದಲ್ಲ.

ಎಲ್ಲಿಂದ ಬಂದೆನೋ ಇಲ್ಲೆನಿತು ಸಮಯವೋ
ಎಲ್ಲಿಗೆಯ್ವುದೊ ಮುಂದೆ – ಮುಂದಾವ ನೋವೊ?
ಬಲ್ಲವರ ಸುಳಿವಿಲ್ಲ ಬಲ್ಲಿದರ ನೆರೆಯಿಲ್ಲ
ಇಲ್ಲಿ ಪರಮಡಿಲಿನಲಿ ತನಗಿನ್ನು ಸಾವೊ?

ದೀನ ದಿಟ್ಟಿಯು ಮೂಡಿ ಎದ್ದರೇನೋ ಎಂದು
ಮಾನಕೇ ಚ್ಯುತಿಯಾಯ್ತು ಇಲ್ಲಿ ತಾಂ ಬಂದು
ಹೀನತನದಿಂ ತನ್ನ ತಿನ್ನುವರು ಇವರೆಂದು
ಮ್ಲಾನಮುಖದಿಂ ಸೊರಗಿ ಕರಗುತಿದೆ ನೊಂದು.

ಹಳೆಯುಗದ ನೆನಪಿಲ್ಲ ಹೊಸ ಜಗದ ಅರಿವಿಲ್ಲ
ಕಳೆದುಳಿದ ದಿನಮಾನದಳತೆ ಗೊತ್ತಿಲ್ಲ
ಎಲ್ಲರೂ ತನ್ನಂತೆ ಕೊಳೆವ ಜೀವಿಗಳೆಲ್ಲ
ಹೊಲ್ಲದೀ ಬಾಳಿನ್ನು ಮೋಕ್ಷಕ್ಕೆ ಸಲ್ಲ.

ಇರವರಿಯದಿರುತಿಹರು ಅದಕ್ಕಾಗಿ ದುಃಖಿಸರು
ಹೊರಹೊಮ್ಮಿ ಸಾಗುತಿದೆ- ಅದ ಕಾಣರಿವರು
ಸರುವ ಸುಖವಿದು ಎಂಬ ಭ್ರಾಂತಿಯಿಂ ತುಂಬಿಹರು
ಜರೆ ಬಾಯ ತೆರೆದಿಹುದು ಅದ ನೋಡದಿಹರು.

ರೆಕ್ಕೆ ಮುರಿದಿಕ್ಕಿದರು ಕಾಲಲಡಿ ತುಳಿಯುವರು
ಹಕ್ಕನೊರೆಯುವವರಿಂಗೆ ಬುದ್ಧಿ ಹೇಳುವರು
ಅಕ್ಕರೆನರಿಯದರು ಸತ್ಯವನೆ ಕಾಣದರು
ಫಕ್ಕನೇ ಮುನಿಸಾಳ್ದು ಸೊಕ್ಕ ಬೀರುವ.

ಇದ ಕಂಡು ಭಯಗೊಂಡು ಕನಿಕರಿಸಿ ಉದ್ಧರಿಸಿ
ಬದುಕಿಸುವೆನಿವರನ್ನು ಎಂದು ನಿಜವರಸಿ
ಹದುಳ ನುಡಿಯಾಡಿದರೆ ಜಗ್ಗಿದರು ಸಿಂಡರಿಸಿ
ಹದನರಿತು ಬೇಡಿದುದು ಮಂಗಳವ ಹರಸಿ.

ಲೋಕ ಬದುಕಿದೊಡಾನು ಮುಕ್ತನಪ್ಪೆನು ಎಂದು
ಸಾಕಲ್ಯದಿಂ ಬೇಡುತಿರೆ ಬೆಳಕ ಕಂಡು
ಆ ಕಡೆಗೆ ಹಾರಿದುದು ನವಚೇತನವ ತಂದು
ನೂಕಿ ತಮ ಬೆಳಕಿತ್ತು ಸಂತಸದೊಳಂದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂಧಿಗಳು
Next post ಮರದ ಮಹತ್ವ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys