ಕೃಷ್ಣಗಿರಿ ಕೃಷ್ಣರಾಯರಿಗೆ

ಕುಮಾರವ್ಯಾಸನ ವಾಣಿಯ ನುಡಿಯುವ
ವೀಣೆಯು- ಗಮಕದ ಶಾಸ್ತ್ರಜ್ಞಾನ
ಆ ಕವಿಕಾವ್ಯದ ದಿವ್ಯ ಧ್ವನಿಯಿಾ
ಕೃಷ್ಣನ ಹೃದಯದ ಗಾನದ ತಾನ-

ಕುವರವ್ಯಾಸನ ದೇಗುಲ ಕೃಷ್ಣನ
ಹಾಡುವ ಸೊಬಗಿನ ಹೃದಯ ನವೀನ
ಆ ಕವಿಯಗ್ಗಳಿಕೆಗಳಂ ಸಾಧಿಸಿ
ಶೋಧಿಸುತುಣಿಸುವ ಮಧುರಸ ಪಾನ.

ಎಲ್ಲಿದೆ ಜೀವ ಎಲ್ಲಿದೆ ಭಾವ
ಮೌನದ ಮಾತನು ಕುಣಿಸುವನಾವ-
ಸಂಗೀತದ ದನಿಯಿಂದಲಿ ಕೂಡಿಸಿ
ರಸಕಳ ತುಂಬುವ ಶಬ್ದದ ಜೀವ.

ಆ ಕವಿಯಿತ್ತನು ಮಾತಿನ ಮುತ್ತು
ಕೃಷ್ಣನ ಕೊರಳಿನ ಗಾನದ ಬಿತ್ತು
ಕೇಳುವ ಹೃದಯವ ಮಿಡಿಯುವ ಗತ್ತು
ಪಾತ್ರವನಾಡಿಪ ಪರಿಣತಿಯಿತ್ತು.

ಎಲ್ಲರನೊಂದೇ ಹೃದಯದಿ ತೋರುವ
ಸರ್ವರ ದೃಷ್ಟಿಗೆ ನೈಜವ ತರುವ
ಕೃಷ್ಣನ ಲೀಲೆಗಳೆಲ್ಲವ ತುಂಬುವ
ಭಾರತ ಚರಿತೆಯ ಹಾಡುವನಾವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನಸು ವಾಸ್ತವ
Next post ಕಿಟ್ಟು-ಪುಟ್ಟು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys