ಕವಿತೆಯೆಂದರೇ ವಿಸ್ಮಯ ಎಂದರು ಕೆಲವರು
ಈ ಬದುಕು ಅದಕ್ಕಿಂತ ವಿಸ್ಮಯ
ಎಲ್ಲೋ ಅಲ್ಲೊಮ್ಮೆ ಇಲ್ಲೊಮ್ಮೆ ಒಂದು
ಪದವೋ ವಾಕ್ಯವೋ ಕೈ ಹಿಡಿದರೆ ಮಾತು
ಬೆಳಕಾದರೆ ಒಂದು ಕವಿತೆ ಈ ಬದುಕೋ
ಕ್ಷಣ ಬಿಡದಂತೆ ಕೈ ಹಿಡಿದು ದರದರ ಎಳೆದು
ಆಕಾಶಕ್ಕೋ ಪಾತಾಳಕ್ಕೋ ಎಸೆದು ನಿರ್ಲಿಪ್ತ
ವಾಗಿ ಮುಂದೆ ನಡೆದು ಇನ್ನಾರದೋ
ಕೈ ಹಿಡಿದೆಳೆಯುತ್ತಿರುವುದನ್ನು
ಕಂಡೂ ಬದುಕುವುದಿದೆಯಲ್ಲಾ
ಇದರ ಮುಂದೆ ಕಾವ್ಯ ಏನು ಮಹಾ
*****
Related Post
ಸಣ್ಣ ಕತೆ
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…