ಅಯ್ಯೋ ನಾನೇ! ಕಂಡ ಸತ್ಯವನೆ ಗ್ರಹಿಸದ
ಎಂಥ ಕಣ್ಣನು ಒಲವು ನನ್ನ ಮುಖಕಿರಿಸಿತು
ಗ್ರಹಿಸದಿದ್ದರೆ ಇರಲಿ ಕಂಡದ್ದ ತಪ್ಪಾಗಿ
ವ್ಯಾಖ್ಯಾನಿಸುವ ನನ್ನ ಅರಿವೇನಾಯಿತು?
ಕಣ್ಣು ಕಂಡದ್ದು ಚೆಲುವಾಗಿದ್ದ ಪಕ್ಷಕ್ಕೆ
ಹಾಗಿಲ್ಲ ಎನುವ ಲೋಕದ ಮಾತಿಗೇನರ್ಥ?
ಅರ್ಥವಿದ್ದಲ್ಲಿ ಪ್ರೀತಿಯ ಕಣ್ಣು ಲೋಕಕ್ಕೆ
ಉಳಿದ ಕಣ್ಣಂತಲ್ಲ; ನಿಜವಾಗಿ ಇದು ಸತ್ಯ
ಕಾದು ಕಂಬನಿ ತುಂಬಿ ನೊಂದ ಪ್ರೀತಿಯ ಕಣ್ಣು
ಬೇರೆ ಜನಗಳ ಕಣ್ಣಿನಂತೆ ಖಂಡಿತ ಅಲ್ಲ
ನನಗೆ ನಿಜ ಕಾಣದ್ದರಲ್ಲಿ ಸೋಜಿಗವೇನು?
ಮರೆ ಸರಿವ ತನಕ ರವಿ ಕೂಡ ಕಾಣುವುದಿಲ್ಲ
ವಂಚಿಸುವೆ ಒಲವೆ ಕಣ್ಣಲ್ಲಿ ಕಂಬನಿ ತರಿಸಿ
ಇಲ್ಲದಿರೆ ನಿನ್ನ ತಪ್ಪೆಲ್ಲ ಕಂಡೀತೆನಿಸಿ
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 148
O me! What eyes hath love put in my head
Related Post
ಸಣ್ಣ ಕತೆ
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…