ಪ್ರತಿಮೆ

ಕಂಬನಿಯ ಕಪ್ಪು ಸಮುದ್ರದ ಆಚೆ ಅಗೋ
ಉಪ್ಪು ಹರಳುಗಟ್ಟಲಾರಂಭಿಸಿದೆ
ಪ್ರಾಣಾಯಾಮಕ್ಕೆ ಬಿಗಿ ಹಿಡಿದ ಉಸಿರು
ಈಚೆ ಕಡೆಯಿಂದ ಹೊರ ಜಿಗಿದಿದೆ
ಸ್ಥಿತಪ್ರಜ್ಞೆ ಕಲ್ಲುಬಂಡೆಯ ಕೊರಕು
ಹೂ ಬಿಡಲು ಎದ್ದಿರುವ ಜೀವಕ್ಕೆ
ತಾಯಾಗಿದೆ
ಅವಕಾಶದ ಅವಗೃಹೀತ ಖಾಲಿ ಜಾಗಕ್ಕೆ
ಉಲ್ಕೆಯೊಂದು ಮೇಲೇರಿದೆ

ಮಳೆಗಾಲದ ಕೆಸರಿನ ತುಷಾರ
ಸಿಂಚನ ಗೈದು ಓ-
ಡಿದೆ ವಾಹನ
ಕೊಳಕಾದ ಬಟ್ಟೆಯೊಳಗೆ
ಕೆಂಪಾಗಿ ಕುಪಿಸಿದೆ ಜೀವ

ಚಳಿಯ ಒತ್ತರ ತಾಳಲಾರದೆ ದಮ್ಮು
ಉತ್ತರಾಯಣಕ್ಕೆ ದಿನ ಎಣಿಸಿದೆ
ಸ್ವರ್ಗದ ಬಾಗಿಲು ತೆರಯುವ ಅಮೂರ್ತ ಮುಹೂರ್ತಕ್ಕೆ
ಜೀವ ಜೀವದಲ್ಲಿ ಸ್ವರ ಸಂಚಾರ ಸ್ವರ ಸಂ
ಚಾರ

ನಾನು ಭೌತ ವಿಜ್ಞಾನದ ಹುಡುಗ
ಅಳೆದೇಬಿಡುವೆ ಅದರ
ಕಂಪನ ವಿಸ್ತಾರ
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಳಗ ಖೇಲ ಬಲ ಮುರಿದೆದ್ದಿತು
Next post ಧ್ಯಾನ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys