ಬದುಕು ಬೇಡ ಅನ್ನಿಸಲಿಲ್ಲ

ಜ್ವರ ನೂರಾನಾಲ್ಕು ಡಿಗ್ರಿಗೆ ಏರಿ ಎದೆ ಹಾರಿ
ಹೋದಾಗಲೂ ಈ ಡಿಗ್ರಿಗಳ ಕೋಟೆಗಳ ಮೀರಿ
ಪ್ರಾಣಪಕ್ಷಿ ಎನ್ನುತ್ತಾರಲ್ಲ ಅದು ರೆಕ್ಕೆ ಬಿಚ್ಚಿ
ಪುರ್ರಂತ ದಿಗಂತ ಸೇರಿ ಅಂಥದೇ ಪಕ್ಷಗಳ ಪ್ರಭಾತಫೇರಿ
ಕೂಡಿಕೊಳ್ಳಲಿ ಈ ಜೀವ ಗರಂ ಇದ್ದುದು ನರಂ ಆಗಲಿ
ಅನ್ನಲಿಲ್ಲ ಆ ಹೊತ್ತಿನಲ್ಲೂ ಸಾವು ಬೇಕೆನಿಸಲಿಲ್ಲ

ಈ ಕೆಂಪು ಬಿಳಿ ಪಂಚ ಪಂಚ ಪ್ರಾತಃಕಾಲ
ಹೇಗೆ ಹೋಗಲಿ ಬದುಕಿನ ಬಟ್ಟೆಗಳ ಕಳಚಿ-
ಜೀವದ ತುಂಬ ವ್ಯಥೆ ತುಂಬಿ ಒಂದು ಥರಾ
ಹೊಟ್ಟೆ ತೊಳೆಸಿ ಬಂತು ಉಸಿರು ಅಲ್ಲೂ ಇಲ್ಲೂ
ತೇಕುತ್ತಿದ್ದಾಗಲೂ ಬದುಕು ಎಷ್ಟು ಸಿಹಿ ಎಷ್ಟು ಸಹ್ಯ
ಅನುಪಾನ ಉಪಚಾರ ತಣ್ಣೀರು ಪಟ್ಟಿಗಳ ಸಶ್ರಮ ಶಿಕ್ಷೆಯ ನಡುವೆ
ನನ್ನ ಚೈತನ್ಯ
ಗೋಕರ್ಣದ ಬೇಲೆ ದೇವಸ್ಥಾನಗಳನ್ನು ಸುತ್ತಾಡಿ
ಹಿರೇಗುತ್ತಿಯನ್ನು ಮೂಸುತ್ತ ಹೊರಟಿತು

ನನ್ನ ಹಳೆಯ ಕನ್ನಡ ಶಾಲೆಯ ಹತ್ತಿರ ಕಾರು ನಿಂತಿತು
ಇಲ್ಲಿಯ ಕ್ಲಾಸುಗಳಲ್ಲಿ ಅಂಗಿ ಚಡ್ಡಿಯ ನಾನು ಇದ್ದೆ
ಒಂದು ದಿನ ಮನೆಗೋಡಿ ಬರುವಾಗ ಇದೇ ಕಂಪೌಂಡಿನಲ್ಲೊಮ್ಮೆ ಬಿದ್ದೆ
ಮಣ್ಣು ಬಾಯೊಳಹೊಕ್ಕಿತು ಥೂಥೂ ಉಗಿದೆ ಎಲ್ಲ ನಗಬೇಕಿತ್ತು
ನಗಲಿಲ್ಲ ನಾ ಇದ್ದಾಗಲೇ ಅಲ್ಲಿದ್ದ ಧ್ವಜದ ಕಂಬ ಕಿತ್ತು ಇಲ್ಲಿ ಹುಗಿದರು
ನನ್ನ ಜೊತೆ ಇದ್ದವರೆಲ್ಲ ಈಗ ಎಲ್ಲೆಲ್ಲಿದ್ದಾರೆ ಮತ್ತೆ
ಹಾಗೆ ಒಟ್ಟಿಗೆ ಸೇರಲಾರೆವು ಇವೆಲ್ಲ ಒಮ್ಮುಖದ ಓಟ
ಯಾವುದೋ ಗುರಿ ಮುಟ್ಟಲಿಕ್ಕಿರುವ ಒಂದೇ ಉಸಿರಿನ ಆಟ
ಇಲ್ಲಿಯ ಕಬಡ್ಡಿ ಮೂಲೋದ್ಯೋಗ ವ್ಯಾಯಾಮ ಪ್ರಾರ್ಥನೆ
ಪಂಚಾಂಗ ಅಮೃತವಾಣಿ ವಾರದ ಚರ್ಚಾಕೂಟ ಬೆಳಗಿನ ಉಪ್ಪಿಟ್ಟು
ನನ್ನ ಮಾಸ್ತರರು ಅಕ್ಕವರು ಗೆಳೆಯರು ಚಾಡಿ ಮಾತು….
ಜ್ವರ ತೊಂಬತ್ತೊಂಬತ್ತಕ್ಕೆ ಇಳಿಯಿತು

ಕಿವಿಯಲ್ಲಿ ಅಘನಾಶಿನಿ ಮೊರೆದಳು
ಅಘನಾಶಿನೀ ನನಗೆ ಹಾದಿ ಬಿಡು
ಅಲ್ಲಿ ತಾರೀಕಟ್ಟೆಯಲ್ಲಿ ಒಂದರೆಗಳಿಗೆ ಕೂತು
ನಿನ್ನ ನೋಡಿ ಮೈ ಮರೆಯುವೆ ಹೇಳು
ಈ ಚಂದ್ರನ್ನ ನಕ್ಷತ್ರಗಳ ತೊಟ್ಟಿಲು ಕಟ್ಟಿ ತೂಗಿದರಾರು
ನಿನ್ನ ಗರ್ಭದ ಪಾತಾಳದೊಳಗೆ ಸೇರಿದ ಜೀವಗಳೆಷ್ಟು
ಈ ದಡವನ್ನು ಕಾಲುಗಳು ತುಳಿದವು
ನಕ್ಷತ್ರಗಳು ಮೈ ತೊಳೆಯಲು ನಿನ್ನಲ್ಲಿಗೇ ಬಂದಿದ್ದವೇ
ಈ ತಾರಿಕಟ್ಟಿ ಕಟ್ಟಿದವರಾರು ಸಭಾಹಿತರ ಮನೆಯವರು
ಯಾವಾಗ ಬಂದರು ನಿನಗೆಷ್ಟು ವರ್ಷ ಇಲ್ಲಿ ರಾಮಸೀತೆ
ಬಂದಿದ್ದು ನಿಜವೇ ಆ ನಾಯಿಯನ್ನು ಆ ಜನರು ಗುಂಡಿಟ್ಟು
ಕೊಂದರೇ ಈ ತೆಂಗಿನ ಮರದ ಕಾಯಿಗಳನ್ನು ಕದ್ದವರಾರು
ದಿವಸದ ಮೊದಲಿನ ದೋಣಿ ಎಷ್ಟಕ್ಕೆ ಹೊರಡುತ್ತದೆ
ಇವರೆಲ್ಲ ಎಲ್ಲಿಯವರು ಏನಾಗಲಿರುವರು ನೀನು ಎಲ್ಲಿಂದ ಬಂದೆ
ಹೋಗುವೆ ಎಲ್ಲಿಗೆ ಈ ನೈಟ್ ಹಾಲ್ಟ್ ಬಸ್ಸು ಇವತ್ತು ರಾತ್ರಿ
ಎಷ್ಟಕ್ಕೆ ಬಂತು ಈ ಹಾದಿ ದೀಪದ ಮಂದ ಬೆಳಕಲ್ಲಿ
ಹೊಳೆವ ಕಲ್ಲು ಬೂದಿ ಮಣ್ಣು ಬೀದಿನಾಯಿ ಪಾಗಾರ ಕೆಂಪುಬಸ್ಸು
ಇವುಗಳ ಅರ್ಥ ಹೇಳು ಅಘನಾಶಿನೀ ನಿನ್ನ ಸುದೀರ್ಘ ಮೌನ
ಕಳೆದು ಏನೇನೆಂದು ಉಸುರು ಈ ನಿನ್ನ ಗಂಡನ ಹೆಸರು
ಹೇಳು ಇಲ್ಲದಿದ್ದರೆ ನನ್ನ ತಲೆ ಹಾಳಾಗಿ ಹೋಳಾಗಿ ಹೋಗುವುದು
ತಾಯೀ ಅದಕ್ಕಾಗಿಯಾದರೂ ಮಾತಾಡು ನನ್ನ ಚೈತನ್ಯ
ನಿನ್ನ ಮಾತುಗಳಿಂದ ಶಾಂತವಾಗಲಿ
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲೆ
Next post ಪಂಜದಮ್ಯಾಲ ನಿನ್ನ ಮನಸು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys