ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆಯೇ?
Next post ಗೆಲುವು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys