ದರುಶನಕ್ಕೆ

ರಾಮ ನಿನ್ನ ನೆನೆದು ನೆನೆದು
ನಾನು ತಣ್ಣನೆ ನೆಂದಿರುವೆ
ನಿನ್ನ ಕೃಪಾ ಬಿಸಿ ತಾಟುವುದೆಂದು
ನಿನ್ನ ಅಡಿದಾವರೆಯಲಿ ಬಂದಿರುವೆ

ರಾಮ ನಿನ್ನ ಭಜಿಸಿ ಭಜಿಸಿ
ನಾನು ಆಸ್ತಿ ನಾಸ್ತಿಗಳಲಿ ಭಾಜಿಸಿರುವೆ
ನಿನ್ನ ಸಾಕ್ಷಾತ್ಕಾರದ ಬೆಳದಿಂಗಳಿಗಾಗಿ
ನಿತ್ಯ ನಾನು ಕೊರಗುತ್ತಿರುವೆ

ರಾಮಾ ನಿನ್ನ ಧ್ಯಾನಿಸಿ ಧ್ಯಾನಿಸಿ
ನಿನ್ನ ಮರೆತು ಧ್ಯಾನಿಸ್ಥರಾಗಿರುವೆ
ನಿನ್ನ ದರುಶನದ ಭಾಗ್ಯಕ್ಕಾಗಿ
ಚಾತಕ ಪಕ್ಷಿಯಂತೆ ಕಾಯುತ್ತಿರುವೆ

ರಾಮಾ ನಿನ್ನ ಕಾಣಲು ವ್ಯಾಕುಲದಿ
ನಾನು ಎಡಬಿಡದೆ ಆಲಾಪಿಸಿರುವೆ
ನಿನ್ನ ಪ್ರತ್ಯೆಕ್ಷ ಅನುಭೂತಿಯೇ
ಎನ್ನ ಹೃದಯಕ್ಕೆ ಅದು ಕೋರಿರುವೆ

ರಾಮಾ ನಿನ್ನ ಚಿದ್‌ಘನರೂಪಕ್ಕೆ
ಈ ನನ್ನ ನಯನವೆಂದು ನೋಡಲಿಹವು
ಆ ಭಾಗ್ಯದ ಗಳಿಗೆಗಳು ಕೂಡಿ
ಮಾಣಿಕ್ಯ ವಿಠಲನಿಗೆ ಬರಲಿಹವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೩
Next post ಪಾಪಿಯ ಪಾಡು – ೬

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys