ರಜೆಯ ಮಜ

ಶಾಲೆಗಿಂದು ರಜೆಯೋ ಏನೋ
ಎಳೆಯರೆದೆಯ ಹರುಷವೇನು
ಹನುಮನಂತೆ ಹಾರುವನೊಬ್ಬ
ಹುಟ್ಟುಡುಗೆಯ ಬಾಲನೊಬ್ಬ

ಬಾಲ್ಯದಲ್ಲಿ ಇಲ್ಲ ಭಯ ಎಲ್ಲ ಜಯ
ಅವನು ಇವನು ಎಲ್ಲ ಸೇರಿ
ಒಂದೆ ಜಲ, ಒಂದೆ ಗಾಳಿ
ಒಂದೇ ನೆಲದ ಅಂಗಳದಿ ಆಡಿ

ತಿಳಿನೀರಲಿ ಹಾರಿ ಜಿಗಿದು
ಕಣ್ಣ ಕೆಂಪಗಾಗಿಸಿ, ಮುಳುಗಿ ಈಜಿ
ಮತ್ಸ್ಯನಾ ಮನೆಯಲ್ಲಿ
ಒಂದು ಗಳಿಗೆ ಕಳೆಯೆ ಅಲ್ಲಿ

ಉತ್ಸಾಹದ ಉತ್ತೇಜನ
ಪಡೆವರೆಲ್ಲ ಮಕ್ಕಳು
ಚೈತನ್ಯದ ಕುಡಿಗಳು
ಅರಳುತಿರುವ ಹೂಗಳು

ಮೈಯ ಕೊಳೆಯ ತೊಳೆದ ಜಲವು
ಮನದ ಕೊಳೆಯ ತೊಳೆಯದಿರದು
ಉಕ್ಕಿ ಉಕ್ಕಿ ಹರಿವ ಜಲದಿ
ಉತ್ಸಾಹವ ಹೆಕ್ಕಿ ತೆಗೆವ ಬುಗ್ಗೆಗಳು

ಮುಂದೆ ಎಂದಾದರೂ ಇವೇ
ಈಜು ಮರಿಗಳು
ಚಿನ್ನವನ್ನೇ ಗೆಲ್ಲುವರು
ದೇಶಕೆ ಕೀರ್ತಿ ತರುವರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ
Next post ಸಂಡಿಗೆ ಕಡಿಯುವ ಹಾಡು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

cheap jordans|wholesale air max|wholesale jordans|wholesale jewelry|wholesale jerseys