ಅಕ್ಷಯ ಪಾತ್ರೆ

ಹನಿಹನಿಸೋ ಮುತ್ತ ಮಳೆಗೆ
ಇಳೆಯ ಕಣ್ಣೊಳೆನಿತೊ ಕಾತುರ
ಬಾನ ಇನಿಯನೊಲವಿಗಾಗಿ
ಧರೆಗೆ ನಿತ್ಯ ಸಡಗರ ||

ಬಿರಿದ ಕುಸುಮ ಅರಳು ಸುಮವು
ಒಲಿದ ಹೃದಯದ ಪ್ರೀತಿಗೆ
ಕೆರೆ-ತೊರೆ ಸರೋವರ ನದನದಿಗಳಲ್ಲೂ
ಜೊನ್ನ ಕಿರಣದ ಅಂದುಗೆ ||

ಪ್ರೇಮ ಸಂದೇಶ ಹೊತ್ತ ಹಕ್ಕಿ
ಸಾಲು ನೀಲ ನಭದಲಿ
ಕೊರಳ ಕೊಳಲಿನ ಕೂಗಿನಲ್ಲೂ
ಕವಿಯ ಕಾವ್ಯದ ಚೆಂದುಲಿ ||

ನನ್ನ ಮಿಲನ ನಿನ್ನ ಚಲನ
ಬಾಳ ನಿತ್ಯ ಯಾತ್ರೆಗೆ
ಸ್ವಾರ್ಥವಿರದ ಅಮೃತ ಸಿಂಚನ
ಭಾವದಕ್ಷಯ ಪಾತ್ರೆಗೆ. ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂಗಾಳಿ
Next post ಕಾಣದೆ ನೀ ಬೊಗಳಬ್ಯಾಡ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys