ನೀ ಮುದುಕಿಯಾದಾಗ

ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು,
ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ.
ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ
ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು ಮನದಲ್ಲಿ.

ಪ್ರೀತಿಸಿದ್ದೆಷ್ಟು ಜನ ನಿನ್ನ ಹರ್‍ಷೋಲ್ಲಾಸಭರಿತ ಗಳಿಗೆಗಳನ್ನ?
ನಿಜದ ಪ್ರೀತಿಯೊ ಸುಳ್ಳೊ, ಪ್ರೀತಿಸಿದ್ದರು ಅವರು ನಿನ್ನ ಚೆಲುವನ್ನ
ಪ್ರೀತಿಸಿದ್ದೊಬ್ಬನೇ ನಿನ್ನಲ್ಲಿ ಹುದುಗಿದ್ದ ಯಾತ್ರಿಕ ಪವಿತ್ರಾತ್ಮವನ್ನ
ಪ್ರೀತಿಸಿದ ಹಾಗೆಯೇ, ಬದಲುತ್ತಿದ್ದ ನಿನ್ನ ಮುಖದ ದುಗುಡಗಳನ್ನ

ಜಗಜಗಿಸಿ ಹೊಳೆವ ಉರಿ ಸರಳುಗಳ ಬಳಿ ಕೂತು ಮುಖ ಬಾಗಿಸಿ,
ಉಸುರಿಕೋ ನಿನ್ನೊಳಗೆ ನೀನೆ ವ್ಯಥೆದನಿಯಲ್ಲಿ, ಹೇಗೆ ಪ್ರೀತಿ
ಓಡಿಹೋಯಿತು ಎಂದು ದೂರದಲ್ಲಿರುವ ಗಿರಿಶಿಖರವೇರಿ
ಮರೆಸಿಕೊಂಡಿತು ತನ್ನ ಮುಖವ ನಕ್ಷತ್ರಗಳ ಮಧ್ಯೆ ತೂರಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಕವಿ ತಾನು ಪ್ರೇಮಿಸಿದ ಹೆಣ್ಣು ಮಾಡ್ ಗಾನಳನ್ನು ಕೇಂದ್ರವಾಗಿಟ್ಟುಕೊಂಡು ಕೆಲವು ಪದ್ಯಗಳನ್ನು ಬರೆದಿದ್ದಾನೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಡಗಿಗಳೂ ಆನೆಯೂ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೧

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys