ಬಾಳಿನ ಹಂಬಲು


ಕೂಸಿಗಂದು ಏನು ಬೇಡ,
ತಿಂಡಿ ಗೊಂಬೆ ಮುದ್ದು ಬೇಡ.
ಏನೊ ಅರಕೆ, ಏನೊ ಬೇನೆ,
ಅತ್ತು ಸೊರಗಿತು :
“ಅಮ್ಮ ಎಲ್ಲಿ ಹೋತು” ಎನುತ
ಅತ್ತು ಸೊರಗಿತು.

ಅಳುವ ಕೇಳಿ ಬಂದ ತಾಯ
ಅಮೃತಸ್ಪರ್‍ಶಕಾರೆ ಗಾಯ,
ತೊಯ್ದ ಕಣ್ಣ ಬಿಚ್ಚಿ, ಸುಳಿಸಿ,
ತೊಂದು ನಗೆಯನು-
“ನಿನ್ನ ನುಳಿಯೆ ಬಾಳು ಶೂನ್ಯ!”
ಎನುವ ನಗೆಯನು.


ಕೂಸು ಬೆಳೆದು ಆದ ರಾಮು,
ಇಂದು ನೆರೆಯ ಮನೆಯ ಶಾಮು
ರಾಮನೊಂದೆ ಬಯಕೆ, ಕನಸು,
ಬಾಳ ಧ್ಯೇಯವು ;
ಆಸೆಗಳಿಗೆ ಕಲ್ಪತರುವು,
ನೋವಿಗಮೃತವು.

ಒಂದೆ ಜೀವದೆರಡು ಕವಲು;
ರಾಮ-ಶಾಮು: ಹಾಡು-ಹೊಳಲು.
ತುಂಬುಗಣ್ಣೊಳವನ ರಾಮು
ಸೆರೆಯಕೊಳುವನು:
“ನಿನ್ನ ನುಳಿಯೆ ಬಾಳು ಬಯಲು”
ಎಂದುಕೊಳುವನು.


ರಾಮುವೀಗ ರಾಮರಾಯ!
ಏನು ಠೀವಿ! ಎಂಥ ಪ್ರಾಯ!
ನಿತ್ಯ ಕನಸುಕಾಂಬ ತೆರದ
ನೋಟದಲೆತವು;
ಒಲುಮೆನೆರೆಗೆ ಸಿಲುಕಿದವನ
ಮನದ ಸೆಳೆತವು!

ಇಂದು ಸರಳೆ ಅವನ ಜಗವ
ತುಂಬಿ, ಬಾಳ ಸೂರೆಗೊಳುವ-
ಳಾತ್ಮವನ್ನೆ ಮೀಸಲಿಟ್ಟು
ರಾಮು ಒಲಿವನು;
“ಸುಳಿದೆ, ಸರಳ, ಬಾಳ ಟೊಳ್ಳು
ತುಂಬಿ”ತೆನುವನು.


ಸರಳೆ ರಾಮರೊಲುಮೆ ಸೂತ್ರ
ಹಸುಳೆ ಕಿಟ್ಟು, ಮೊದಲು – ಚಿತ್ರ!
ರಾಮಗದರ ಬಾಳ ಗುಟ್ಟು
ಅರ್‍ಥವಾಗದು:
“ನಮ್ಮ ಪ್ರೇಮಕಡ್ಡಬಂದ
ಗಂಡವೇನಿದು?”

ಒಂದು ದಿನದಿ ಕೂಸು ತನ್ನ
ಬೆಳಕೆ ದ್ರವಿಸಿ ಹರಿವ ಕಣ್ಣ
ಮೊಗದಿ ನೆಟ್ಟು, ಅವನ ಬೆರಳ
ಬಾಯಿಗೊಯ್ಯಲು,
ರಾಮನೆಂದ, “ತೀರಿತಿಂದು
ಬಾಳ ಹಂಬಲು!”


ರಾಮರಾಯನೆಂಥ ಮನುಜ!
ಸಿರಿಯ ಘೃಣೆಯ ಹಿರಿಯ ಕಣಜ!
ಏನು ಪ್ರತಿಭೆ, ಎಂಥ ವಿನಯ!-
ಯಶದ ಹೊಗಳದು.
ಆತನೊಂದೆ ಬಯಕೆ ಒಲಿದು
ಬರುವ ಮೊಳಗದು.

ಜಸದ ಹೆಣ್ಣು ಒಲಿದು ನಗಲು,
ನಗೆಯು ಮೊಗದಿ ಬಿಂಬಿಸಿರಲು,
ಬಾಳ ಸಂಜೆಯಲ್ಲಿ ಯಶಕೆ
ರಾಮರಾಯರು,
“ಬಂದೆ, ಬಾಳು ಪೂರ್ಣವಾಯ್ತು”
ಎಂದು ನುಡಿದರು.


“ಇಲ್ಲಿ ಹಳ್ಳ, ಅಲ್ಲಿ ತಿಟ್ಟು”
ಎನುತ ಕೋಲ ಹಿಡಿದು ಪುಟ್ಟು
ನಡೆಸುತಿರುವ ಪಲಿತ ಶಿರದ
ತಾತ-ರಾಯರು!
ಕೂಸಿಗಿಂತ ತ್ರಾಣಿಯಲ್ಲ
ಪಾಪ!-ರಾಯರು.

ಒಂದು ದಿನದೊಳಿರುಳಿನಲ್ಲಿ
ಕಿರಣವೊಂದು ಹೊನ್ನ ಚೆಲ್ಲಿ,
ಬಾಳ ಸೆರೆಯ ಬೆಳಗೆ, ತಾತ
ಚಕಿತರಾದರು:
“ಬಂದು ಬಾಳಿಗರ್‍ಥವಿತ್ತೆ,
ಮೃತ್ಯು” ಎಂದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಲಿ ತಾ ಮೈನೆರದು
Next post ಅನಾಥ ಬಂಧು

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys