ಮಹಾತ್ಮರ ಉಪವಾಸ

[ರಕ್ತಾಕ್ಷಿ ಸಂ| ದ ಭಾದ್ರಪದ ಬ|೫ (೧೪-೯-೧೯೨೪)ಯಿಂದ ಆಶ್ವೀಜ ಶು।೧೧ (೮—೧೦-೧೯೨೪) ಯ ವರೆಗೆ ಮಹಾತ್ಮಾ ಗಾಂಧಿಯವರು ಧಿಲ್ಲಿಯಲ್ಲಿ ಮಾಡಿದ ೨೧ ದಿನಗಳ ಉಪವಾಸ]

ಮಂಜಿನೇಕಾಂತದಲಿ ಶ್ರೀಹರಿಯ ಹಂಬಲಿಸಿ,
ಹೃದಯ ಕ್ಷುಧಯನ್ನೂಡುತೊಡಲ ಹಸಿವಿಂದಂ,
ಮನದ ರಂಭೆಯ ಗೆದ್ದು ೧ಶುಕನಾತನನ್ನೊಲಿಸಿ,
ಭಕ್ತಿಗಂಗೆಯ ಭಾರತದ ತೃಷೆಗೆ ತಂದಂ ೪

೨ಉರುವೇಲೆಯರಳಿಯಡಿಯಲಿ ಚಿರಂ ಹಸಿದರೆದು,
ಮಾರನಂ ಮುರಿದು ಸಂಬುದ್ಧನೆಮಗಗ್ಗಂ
ನಿಬ್ಬಾಣಮೊಂದೆ, ೩ತಣ್ಹೆರಣ್ಯಮಂ ತರಿದು,
ತೋರ್ದನರಿಯಟ್ಟಂಗಿಕದ ಧಮ್ಮಮಗ್ಗಂ೪ ೮

ಕಟ್ಟಳಯೆ ಕುರುಡಿನಲಿ ಬೆಳಕಿನೊಡೆಯನ ಸೋಸು
ವೆಮ್ಮೆದೆಯ ಪರೆಯ ಹೆರೆದೆಮ್ಮೊಳಗೆ ನಿಸದಂ
ನೆಲಸಿರುವ ೫ಸ್ವಾರಾಜ್ಯವೆಮಗೆ ತೋರಿಸೆ ಯೇಸು
೬ಯೋರ್ದನಿನ ಬನದಿ ನಲವತ್ತು ದಿನ ಹಸಿದಂ ೧೨

ಅರಬರೆದೆಯರಬಿಂದ೮ ನೊಂದು, ನವಜೀವನವ
ನುಪವಾಸದಿಂದರಸಿ ೯ಹಿರೆಯ ಕಂದರಿಯಿಂ
ದೇವರಲ್ಲದೆ ದೇವರಿಲ್ಲೆಮ್ಮ ಕಾವನವ
ನೆಂಬ ಸತ್ಯದಿ ಕಂಡನದನರಬರೆರೆಯಂ. ೧೬

ಗುರುವೆ ಇಪ್ಪತ್ತೊಂದು ದಿನದುಪೋಷ್ಯವ ನೋಂತು
ಧಿಲ್ಲಿಯಿಂ ನೀ ಚೆಲ್ಲಿದೀ ಪ್ರೇಮ ಬೀಜಂ
ಭಾರತದ ಭಾಗ್ಯಲತೆಯಾಗಿ ಮಡಲಿಡದೆಂತು?
ಬೆಳಸದೆಂತಮರ ಸೌದರ್ಯನಿದು ಸಾಜಂ? ೨೦
*****

೧ ಪರಿಕ್ಷಿದ್ರಾಯನಿಗೆ ಶ್ರೀಮದ್ಭಾಗವತವನ್ನು ಹೇಳುವ ದ್ವಾರಾ ಶುಕಯೋಗಿ ಭಕ್ತಿಮಾರ್ಗವನ್ನು
ಬೋಧಿಸಿದನು
೨ ಬುದ್ದಗಯೆಯ ಸಮೀಪದಲ್ಲಿರುವ ವನ
೩ ತೃಷ್ಣೆ, ವಿಷಯ ಲಾಲಸೆ
೪ ಅರಿಯೋ ಅಟ್ಟಿಂಗಿಕೋ ಧಮ್ಮ ಮಗ್ಗೊ – The noble eightfold path.
೫ ಸ್ವರ್ಗದ ರಾಜ್ಯ
೬ ಝರೋಸಲೇಮಿನ ಬಳಿಯ ಒಂದು ಹೊಳೆ
೮ ಅರಬು=ಶುಷ್ಕತೆ, ಅಜ್ಞಾನ
೯ ಮಕ್ಕದ ಸಮೀಪದಲ್ಲಿರುವ ‘ಹಿರಾ’ ಎಂಬ ಗುಡ್ಡದ ಗುಹೆಯಲ್ಲಿ ಮಹಮ್ಮದನು ಧ್ಯಾನಿಸುತ್ತಿದ್ದನು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿಯ ಸೋಲಿಸಿದ ಕನ್ನಡ
Next post ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟಿಕ್ ಬದಲು ಪಾಲಿಮರ್

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys